ಸುರಪುರ: ವಿದ್ಯಾರ್ಥಿಗಳು ನಿಮ್ಮ ಒದಿಗಾಗಿ ಸಾಕಷ್ಟು ಸವಲತ್ತುಗಳನ್ನು ಸರ್ಕಾರವು ಮತ್ತು ನಿಮ್ಮ ಪೋಷಕರು ವದಗಿಸುತ್ತಿದ್ದಾರೆ ಅವಗಳನ್ನು ಸದೂಪಯೋಗಿಸಿಕೊಂಡು ಉನ್ನತ್ತ ಫಲಿತಾಂಶದಿಂದ ತೇರ್ಗೆಡೆಹೊಂದುವತ್ತ ನಿಮ್ಮ ದಿನಚರಿಗಳನ್ನು ರೊಪಿಸಿಕೊಂಡು ಕಾಲೇಜಿಗೆ ಕಿರ್ತಿ ತರಬೇಕು ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ತಿಳಿಸಿದರು.
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಭಾಗಂಣದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಿಮಗೆ ಲ್ಯಾಪ್ಟಾಪ್ ವಿತರಿಸುವುದು ನಿಮ್ಮ ಅಭ್ಯಾಸಕ್ಕೆ ಸಹಾಯವಾಗಲೆಂದು ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಬ್ಯಾಸಮಾಡಬೇಕು ಮತ್ತು ಇದರಿಂದ ವಿದ್ಯಾರ್ಥಿಗಳು ವಾಮಮಾರ್ಗಹಿಡಿದು ದಾರಿತಪ್ಪುವುದು ಬೇಡ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಚಾರ್ಯ ವೆಂಕೋಬ ಬಿರಾದರ್ ಮಾತನಾಡಿ ವಿದ್ಯಾರ್ಥಿಗಳು ನಿಮಗೆ ಸಿಗುವ ಸವಲತ್ತುಗಳನ್ನು ಸದೂಪಯೋಗ ಪಡಿಸಿಕೊಳ್ಳಬೇಕು ಮುಖ್ಯಮಂತ್ರಿಗಳ ಉಚಿತಲ್ಯಾಪಟಾಪ್ ವಿತರಣೆ ಯೋಜನೆಯನ್ನು ಈ ಬಾರಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗಿದೆ ಒಟ್ಟು ನಮ್ಮ ಕಾಲೇಜಿಗೆ ೨೧೦ ಲ್ಯಾಪಟಾಪ್ಗಳು ವಿತರಣೆಗೆ ಸಿದ್ದವಾಗಿವೆ ಸರ್ಕಾರದ ನಿಯಮದಂತೆ ಆಯಾ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ನಿಮಗೆ ಸಿಗುವ ಅವಕಾಶಗಳನ್ನು ಸದಬಳಕೆಮಾಡಿಕೊಂಡು ನಿಮ್ಮ ಕಾಲೇಜಿಗೆ ಕೀರ್ತಿತಂದು ನಿಮ್ಮ ತಂದೆ ತಾಯಿ ರುಣ ತೀರಸಬೇಕು ಎಂದು ಹೇಳಿದರು.
ಈ ಸಮಯದಲ್ಲಿ ಸಾಂಕೇತಿಕವಾಗಿ ೬ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ಗಳನ್ನು ವಿತರಿಸಲಾಯಿತು.
ಮುಖಂಡರಾದ ಸುರೇಶ ಸಜ್ಜನ್, ಹೆಚ್.ಸಿ.ಪಾಟೀಲ್, ಉಪನ್ಯಾಸಕರಾದ ಭೀಮಣ್ಣ ಮಾಲಿಪಾಟಿಲ್, ಎಸ್.ಎಸ್ ರಾಮಪುರೆ, ಬಲಭೀಮ ದೇಸಾಯಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…