ಸುರಪುರ: ಮುಸ್ಲಿಂ ಸಮಾಜ ಸುರಪುರ ರಂಗಂಪೇಟೆ ಹಾಗು ತಿಮ್ಮಾಪುರ ವತಿಯಿಂದ ಏಕ್ ಶ್ಯಾಮ್ ಶಹೀದೊಕೆ ನಾಮ್ ಎಂಬ ಹೆಸರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಕಳೆದ ಒಂದು ವರ್ಷದ ಹಿಂದೆ ನಡೆದ ಫುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಹಾಗು ಸಿಎಎ,ಎನ್ಆರ್ಸಿ ಮತ್ತು ಎನ್ಪಿಆರ್ ವಿರೋಧಿಸಿ ನಡೆದ ಹೋರಾಟದಲ್ಲಿ ಹತರಾದ ನಾಗರಿಕರಿಗೆ ಶ್ರದ್ಧಾಂಜಲಿಯಾಗಿ ಮಗರದ ರಂಗಂಪೇಟೆಯ ಜಾಮೀಯಾ ಮಸೀದಿಯಿಂದ ಸುರಪುರದ ಡಾ. ಬಾಬಾ ಸಾಹೇಬ ಅಂಬೇಡ್ಕರ ವೃತ್ತದ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಮೇಣದ ಬತ್ತಿ ಹಿಡಿದು ಶಾಂತಿಯುತ ಮೆರವಣಿಗೆ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಫುಲ್ವಾಮಾ ದಾಳಿಯನ್ನು ಖಂಡಿಸಿದರು.ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡು ಹುತಾತ್ಮ ಯೋಧರಿಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಅಹ್ಮದ್ ಪಠಾಣ,ಮುಫ್ತಿ ಎಕ್ಬಾಲ್ ಅಹ್ಮದ್ ಸಾಬ್ ಒಂಟಿ ಫುಲ್ವಾಮಾ ದಾಳಿಯನ್ನು ಖಂಡಿಸಿ ಮಾತನಾಡಿದರು.
ಮೆರವಣಿಗೆಯಲ್ಲಿ ಅಬ್ದುಲ್ ಗಫೂರ ನಗನೂರಿ,ಮುನವರಸಾಬ್ ಅರಕೇರಿ,ಮಹಿಬೂಬಸಾಬ್ ಒಂಟಿ,ಅಬ್ದುಲ್ ಮಜೀದ್ಸಾಬ್ ಖುರೇಶಿ,ಎ.ಆರ್.ಪಾಶಾ,ಖಾಲೀದ್ ಅಹ್ಮದ ತಾಳಿಕೋಟೆ,ನಿಜ್ಜು ಉಸ್ತಾದ,ನಾಸೀರ್ ಹುಸೇನ್ ಕುಂಡಾಲೆ,ಮಹ್ಮದ್ ಕಮರುದ್ದೀನ್,ಲಿಯಾಖತ್ ಹುಸೇನ್,ಜಹೀರ್ ಬಗ್ಗು,ಬಾಬಾ ಸಾಬ್ ಶೋರಾಪುರ,ದಾವೂದ್ ಪಠಾಣ,ಶೇಖ್ ಇತ್ತಿಹಾಕ್ ಹುಸೇನ್,ಸಯ್ಯದ್ ಇದರೀಸ್ ಜಹಾರೀರದಾರ,ಅಬೀದ್ ಹುಸೇನ್ ಪಗಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…