‘ಸಮಕಾಲೀನ ಸಾಹಿತ್ಯ ಮತ್ತು ಸಿನೇಮಾ’ ಕುರಿತ ವಿಶೇಷ ಕಾರ್ಯಕ್ರಮ

ಕಲಬುರಗಿ: ಭಾಷೆಯ ಬಗ್ಗೆ ಯಾವುದೇ ತರಹದ ಮಡಿವಂತಿಕೆಯನ್ನು ಇಟ್ಟುಕೊಳ್ಳದೇ ಎಲ್ಲಾ ಭಾಷೆಯನ್ನೂ ಪ್ರೀತಿಸಿ, ಗೌರವಿಸಬೇಕು. ಆದರೆ, ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸಬೇಕೆಂದು ಕನ್ನಡ ಚಲನಚಿತ್ರ ನಟ ಭರತ್ ಸಾಗರ ಅಭಿಪ್ರಾಯಪಟ್ಟರು.

ವಿಶ್ವಜ್ಯೋತಿ ಪ್ರತಿಷ್ಟಾನದ ವತಿಯಿಂದ ನಗರದ ಆಳಂದ ರಸ್ತೆಯಲ್ಲಿರುವ ಬಸವೇಶ್ವರ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ‘ಸಮಕಾಲೀನ ಸಾಹಿತ್ಯ ಮತ್ತು ಸಿನೇಮಾ’ ಕುರಿತ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾಷೆ ಸಂಪರ್ಕದ ಸೇತುವೆಯಾಗಿದ್ದು, ಕನ್ನಡಿಗರು ವ್ಯವಹಾರಕ್ಕಾಗಿ ಎಲ್ಲಾ ಭಾಷೆಗಳನ್ನು ಕಲಿಯಬೇಕು. ಆದರೆ ಮಾತೃಭಾಷೆಯಲ್ಲೇ ವ್ಯವಹರಿಸಬೇಕು. ಕನ್ನಡ ಪುಸ್ತಕಗಳನ್ನು ಓದಬೇಕು. ಕನ್ನಡ ಸಿನಿಮಾಗಳನ್ನು ವೀಕ್ಷಿಸುವ ಮೂಲಕ ಭಾಷೆ ಮತ್ತು ಕಲಾವಿದರನ್ನು ಬೆಳೆಸಬೇಕು ಎಂದು ಮಾರ್ಮಿಕವಾಗಿ ಮಾತನಾಡಿದರು.

ಪ್ರಸಿದ್ಧ ಕಥೆಗಾರ ಸಿದ್ಧರಾಮ ಹೊನ್ಕಲ್ ಮಾತನಾಡಿ, ಸಾಹಿತ್ಯ ಬರವಣಿಗೆಗೆ ಅಧ್ಯಯನ ಬಹಳ ಮುಖ್ಯ. ಕಥೆಯಿರಲಿ, ಕವನವಿರಲಿ ಸಾಹಿತ್ಯದ ಯಾವುದೇ ಪ್ರಕಾರವಿರಲಿ, ಅದಕ್ಕೊಂದು ಸಮರ್ಪಕವಾದ ಸಿದ್ಧತೆ ಬೇಕು. ಆ ಸಿದ್ಧತೆಗಾಗಿ ಇಂದಿನ ಯುವ ಜನತೆ ಉತ್ತಮ ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡಬೇಕೆಂದರು.

ಪ್ರತಿಷ್ಟಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಯಾವುದೇ ಸಿನಿಮಾದ ಯಶಸ್ಸಿಗೆ ಕಥೆ, ಕಲಾವಿದರ ಆಯ್ಕೆ ಮತ್ತು ನಿರ್ದೇಶನ ಮುಖ್ಯವಾಗುತ್ತದೆ. ಕನ್ನಡದಲ್ಲಿ ಅಪಾರ ಸಾಹಿತ್ಯ ಸಂಪತ್ತು ಇದೆ. ಉತ್ತಮ ಕಲಾವಿದರಿದ್ದಾರೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಕನ್ನಡ ಚಿತ್ರರಂಗ ಇನ್ನಷ್ಟು-ಮತ್ತಷ್ಟು ಬೆಳೆಯುತ್ತದೆ ಎಂದು ಹೇಳಿದರು.

‘ಸಿನಿಮಾ ಈಗ ಮನರಂಜನೆಗೆ ಮಾತ್ರ ಸೀಮಿತವಾಗಿದೆ. ಆದರೆ ಸಮಾಜ ತಿದ್ದುವ ಕೆಲಸವನ್ನು ಮಾಡುತ್ತಿಲ್ಲ. ಹಿಂದಿನ ದಿನಮಾನಗಳಲ್ಲಿ ಸಮಾಜದ ವಿಭಿನ್ನ ದೃಷ್ಟಿಕೋನವನ್ನು ಇಟ್ಟುಕೊಂಡು ಸಿನಿಮಾಗಳನ್ನು ಮಾಡಲಾಗುತ್ತಿತ್ತು. ಆ ಸಿನಿಮಾಗಳು ಸಮಾಜವನ್ನು ಸುಧಾರಿಸುವುದರೊಂದಿಗೆ ಉತ್ತಮ ಸಂದೇಶಗಳನ್ನು ಸಹ ಸಮಾಜಕ್ಕೆ ನೀಡುತ್ತಿದ್ದವು.’     – ವಿಜಯಕುಮಾರ ತೇಗಲತಿಪ್ಪಿ, ಸಾಂಸ್ಕೃತಿಕ ಸಂಘಟಕ

ಕಾಲೇಜಿನ ಪ್ರಿನ್ಸಿಪಾಲ್ ಡಾ.ಅಂಬಾರಾಯ ಹಾಗರಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಳಂದ ಎಸ್.ಆರ್.ಜಿ. ಫೌಂಡೇಷನ್ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ, ಸಾಮಾಜಿಕ ಚಿಂತಕರಾದ ವಾಣಿಶ್ರೀ ಸಗರಕರ್, ಶುಭಾಂಗಿ ಪೊದ್ದಾರ, ಪ್ರೊ.ಮಹಾದೇವ ಬಡಾ, ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಶರಣ ಚಿಂತಕ ಶಿವಶರಣಪ್ಪ ಕುಸನೂರ, ನ್ಯಾಯವಾದಿ ಹಣಮಂತರಾಯ ಅಟ್ಟೂರ ವೇದಿಕೆ ಮೇಲಿದ್ದರು.

ಇದೇ ಸಂದರ್ಭದಲ್ಲಿ ಭರತ್ ಸಾಗರ ನಟಿಸಿರುವ ‘ಕಾಲವೇ ಮೋಸಗಾರ’ ಕನ್ನಡ ಚಲನಚಿತ್ರದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ನ್ಯಾಯವಾದಿ-ಗಾಯಕ ಹಣಮಂತರಾಯ ಅಟ್ಟೂರ ಅವರು ಹಾಡಿದ ‘ಏನ್ ಆಗ್ತಾದೋ… ಎಂತಾಗ್ತದೋ… ಈ ನಾಡಾ… ನೀ ನೋಡಾ… ಎಂಬ ಕಡಕೋಳ ಮಡಿವಾಳಪ್ಪ ನವರ ಗೀತೆ ನೆರೆದಿದ್ದ ಪ್ರೇಕ್ಷಕರ ಮನ ಗೆದ್ದಿತ್ತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420