ಬಿಸಿ ಬಿಸಿ ಸುದ್ದಿ

ಬಾಲಕಾರ್ಮಿಕ ಯೋಜನಾ ನಿರ್ದೇಶಕರ ದಾಳಿ: ಗುಟ್ಕಾ ನಿಷೇಧಿತ ಪ್ಲಾಸ್ಟಿಕ್ ವಶ

ಸುರಪುರ: ೦೬ ರಿಂದ ೧೮ ವರ್ಷದೊಳಗೆ ಬರುವ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ ಕೂಲಿಕೃಷಿ ಆಧಾರಿತ ಅಂಗಡಿ ಹೋಟೆಲ್ ರೆಸ್ಟೋರೆಂಟ್ ಗ್ಯಾರೆಜ್ ಬಾರ್‌ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಶಾಲೆಬಿಟ್ಟ ಮಕ್ಕಳನ್ನು ದುಡಿಸಿಕೊಳ್ಳುವುದು ಕಂಡುಬಂದಲ್ಲಿ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘವೀರಸಿಂಗ್ ಠಾಕೂರ್ ಮಾತನಾಡಿದರು.

ತಾಲೂಕಿನ ದೇವಿಕೇರಾ ರತ್ತಾಳ ಹಾಗು ನಗರದ ರಂಗಂಪೇಟೆ ತಿಮ್ಮಾಪುರ ಮತ್ತಿತರೆ ಕಡೆತಗಳಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಹಾಗು ಗುಟ್ಕಾ ಮತ್ತು ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ ಮಾತನಾಡಿ, ಬಾಲಕಾರ್ಮಿಕ ಪದ್ದತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದೆಮೆಗಳಲ್ಲಿ ಮತ್ತು ಇತರೆ ಉದ್ಧೆಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯವನ್ನು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಜೊತೆಗೆ ನಗರಾದ್ಯಂತ ಅನಿರೀಕ್ಷಿತ ತಪಾಸಣೆ ಕೈಗೊಂಡು ಪತ್ತೆಯಾದ ಮಕ್ಕಳ ದಾಖಲೆಗಳನ್ನು ಪರೀಕ್ಷಿಸಲಾಗುತ್ತಿದೆ ಹಾಗೂ ಅಂತಹ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರುಗಳಿಗೆ ಸೂಚಿಸಲಾಗುವುದು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ಪ್ರತಿ ಮಗುವಿಗೆ ರೂ.೫೦೦೦೦/- ಗಳನ್ನು ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದಾಗಿದೆಂದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ರತ್ತಾಳ, ದೇವಿಕೇರಿ ಗ್ರಾಮಗಳ ಹಾಗು ನಗರದ ರಂಗಂಪೇಠ-ತಿಮ್ಮಾಪೂರದಲ್ಲಿನ ಅಂಗಡಿಗಳ ಮೇಲೆ ದಾಳಿಮಾಡಿ ಪ್ಲಾಸ್ಟಿಕ್ ಮತ್ತು ಗುಟ್ಖಾ ಪಾಕೇಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ತಂಬಾಕು ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ, ಟಿ.ಎಚ್.ಓ ಕಛೆರಿಯ ಸಿಬ್ಬಂದಿ ಹಾಗೂ ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತ ರಾವ್ ಕೋತ್ವಾಲ್ ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago