ಸುರಪುರ: ಸಹಕಾರ ರಂಗ ಇಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ,ತಾವು ಸಹಕಾರ ರಂಗದ ಭಾಗವಾಗಿ ಇಂದು ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರಾಗಿ ನೇಮಕಗೊಂಡಿರುವುದು ಸಂತೋಷದ ಸಂಗತಿ ತಾವೆಲ್ಲರು ಬಸವೇಶ್ವರ ಪತ್ತಿನ ಸಹಕಾರ ಸಂಘವನ್ನು ಎತ್ತರಕ್ಕೆ ಬೆಳೆಸುವಂತೆ ಯಾದಗಿರಿಯ ದಾಸಬಾಳ ಮಠದ ವಿರೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ನಗರದ ತಿಮ್ಮಾಪುರದಲ್ಲಿ ಆರಂಭಗೊಂಡಿರುವ ಶರಣಬಸವೇಶ್ವರರ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಬಸವೇಶ್ವರ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕ ಸೂಗುರೇಶ ವಾರದವರ ಮನೆಯಲ್ಲಿ ಎಲ್ಲಾ ನಿರ್ದೇಶಕರಿಗೆ ಸನ್ಮಾನಿಸಿ ಮಾತನಾಡಿ,ತಾವೆಲ್ಲ ನಿರ್ದೇಶಕರು ಸೇರಿ ಸಮಾಜದಲ್ಲಿನ ಜನರ ಆರ್ಥಿಕ ಸಂಕಷ್ಟಕ್ಕೆ ನೆರವಾಗಿ ಎಲ್ಲರನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾಗುವಂತೆ ತಿಳಿಸಿ ಎಲ್ಲರನ್ನು ಸನ್ಮಾನಿಸಿ ಗೌರವಿಸಿದರು.
ಶ್ರೀಗಳಿಂದ ಆಶೀರ್ವಾದ ಪಡೆದ ನೂತನ ನಿರ್ದೇಶಕರಾದ ಮನೋಹರ ಎಂ.ಜಾಲಹಳ್ಳಿ,ಸೂಗುರೇಶ ವಾರದ,ಜಯಲಲಿತ ಪಾಟೀಲ,ಶ್ವೇತಾ ಎಂ ಗುಳಗಿ,ಶರಣಪ್ಪ ಕಳ್ಳಿಮನಿ ಹಾಗು ಜಗದೀಶ ಪಾಟೀಲ ಸೂಗುರು ಇವರು ಶ್ರೀಗಳಿಗೆ ಫಲ ತಾಂಬುಲ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಷಡಕ್ಷರಿ ಹಿರೇಮಠ,ಪ್ರಕಾಶ ಅಂಗಡಿ ಹೆಮ್ಮಡಗಿ,ಮಹೇಶ ಪಾಟೀಲ,ಮಹಾಂತೇಶ ದೇಸಾಯಿ,ರಾಜೇಶ್ ಯರಮಸಾಳ,ರಾಜು ದೇವರಗೋನಾಲ,ಬಸವರಾಜ ವಾರದ,ಸತೀಶ ವಾರದ ಸೇರಿದಂತೆ ವಾರದ ಕುಟುಂಬದ ಸದಸ್ಯರುಗಳಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…