ವಿವಿಧ ಕಾಮಗಾರಿಗಳಿಗೆ ಹರ್ಷಾನಂದ ಗುತ್ತೇದಾರ ಚಾಲನೆ

0
84

ಆಳಂದ: ತಾಲೂಕಿನ ಗಡಿಗ್ರಾಮ ಜಮಗಾ(ಕೆ)ನಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ಚಾಲನೆ ನೀಡಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ೪೫ ಲಕ್ಷ ರೂ.ಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿ, ತಮ್ಮ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಕ್ಷೇತ್ರದ ಎಲ್ಲ ಹಳ್ಳಿಗಳಿಗೂ ಅನುಕೂಲವಾಗುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದೆನೆ ಎಂದರು.

Contact Your\'s Advertisement; 9902492681

ತಂದೆಯವರು ಶಾಸಕರಾದ ಮೇಲೆ ೨ ವರ್ಷಗಳಲ್ಲಿ ಖಜೂರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಅತಿ ಹೆಚ್ಚು ಅನುದಾನ ತರುವಲ್ಲಿ ಶ್ರಮಿಸಿದ್ದೇನೆ. ಕ್ಷೇತ್ರದ ಪ್ರತಿ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಗ್ರಾಮೀಣ ಸಂಪರ್ಕ ರಸ್ತೆ ಸುಧಾರಣೆಗೆ ಒತ್ತು ನೀಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಬು ಮೂಲಗೆ, ಮಹೇಶ ಗೌಳಿ, ಬಾಳು ಸೂರ್ಯವಂಶಿ, ಯಲ್ಲಾಲಿಂಗ ಮೂಲಗೆ. ಅಧಿಕಾರಿ ಅರುಣ ಬಿರಾದಾರ ಸೇರಿದಂತೆ ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here