ವಸತಿ ನಿಲಯ ಕಾಮಗಾರಿಗೆ ಶಾಸಕ ಗುತ್ತೇದಾರ ಚಾಲನೆ

0
127

ಆಳಂದ: ಪಟ್ಟಣದ ಜೀರಹಳ್ಳಿ ರಸ್ತೆಯಲ್ಲಿ ೧೦೦ ವಿದ್ಯಾರ್ಥಿಗಳ ಸಾಮರ್ಥ್ಯದ ವಸತಿ ನಿಲಯ ಕಾಮಗಾರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಶನಿವಾರ ಗುದ್ದಲಿ ಪೂಜೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗ ನಿರ್ಮಾಣವಾಗುತ್ತಿರುವ ವಸತಿ ನಿಲಯವು ಎಲ್ಲ ಸೌಲಭ್ಯಗಳನ್ನು ಹೊಂದಿರಲಿದೆ ಇದರಿಂದ ವಿದ್ಯಾರ್ಥಿಗಳಿಗೆ ಅಪಾರ ಪ್ರಮಾಣದ ಅನೂಕೂಲವಾಗಲಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿಲಯವು ಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

Contact Your\'s Advertisement; 9902492681

ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಓದಲು ಮತ್ತು ಉನ್ನತ ಶಿಕ್ಷಣ ಪಡೆಯಲು ಬರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಬಹಳ ಉಪಯೋಗವಾಗಲಿದೆ. ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಅದನ್ನು ವಿದ್ಯಾರ್ಥಿಗಳ ಉಪಯೋಗಕ್ಕೆ ಬರುವಂತೆ ಮಾಡಬೇಕು ಎಂದು ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ಮಾಣದ ಉಸ್ತುವಾರಿ ಹೊತ್ತಿರುವ ಝಿಂಗಾಡೆ ಕನ್ಸ್ಟ್ರಕ್ಷನನ ನಾರಾಯಣ ಝಿಂಗಾಡೆ, ಅಧಿಕಾರಿ ಕಾರ್ತೀಕ, ಶ್ರೀನಿವಾಸ, ಪುರಸಭೆ ಸದಸ್ಯ ರಾಜಶೇಖರ ಸನ್ಮುಖ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here