ಅಪ್ಪುಗೌಡರ ಜನ್ಮದಿನದ ನಿಮಿತ್ತ: ಬೃಹತ್ ಉದ್ಯೋಗ ಮೇಳದ ಪ್ರಚಾರಾಂದೋಲನಕ್ಕೆ ಚಾಲನೆ

0
82

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಜನ್ಮದಿನದಂಗವಾಗಿ ಶ್ರೀ ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿಗಳ ಬಳಗದ ವತಿಯಿಂದ ಫೆ.೨೮ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಎನ್.ವಿ.ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಉದ್ಯೋಗ ಮೇಳದ ಕುರಿತು ಇಲ್ಲಿನ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳಿಗೆ ತೆರಳಿ ಪ್ರಚಾರಾಂದೋಲನ ನಡೆಸಲಾಯಿತು.

ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯೋಗದ ಸಮಸ್ಯೆ ಯುವಕರನ್ನು ಕಾಡುತ್ತಿದೆ. ಸಾಲ ಮಾಡಿ ಹೆತ್ತವರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿದರೂ ವಿದ್ಯಾವಂತ ಯುವಕರು ಉದ್ಯೋಗವಿಲ್ಲದೇ ತಮ್ಮ ಭವಿಷ್ಯದ ಚಿಂತೆಯಲ್ಲಿಯೇ ದಿನ ದೂಡುವಂತಹ ಸ್ಥಿತಿಯಿದೆ. ಈ ಸಮಸ್ಯೆಗಳನ್ನು ಮನಗಂಡು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಳಿಲು ಸೇವೆ ಎನ್ನುವ ಹಾಗೇ ಈ ಬೃಹತ್ ಉದ್ಯೋಗ ಮೇಳವನ್ನು ರೂಪಿಸಿದ್ದಾರೆ. ಈ ಉದ್ಯೋಗ ಮೇಳದ ಸದುಪಯೋಗವನ್ನು ಈ ಭಾಗದ ಯುವಕರು ಪಡೆದುಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

Contact Your\'s Advertisement; 9902492681

ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಹಾಗೂ ಸಾಹಿತ್ಯ ಪ್ರೇಮಿ ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿ, ಯುವಕ, ಯುವತಿಯರು ಸರ್ಕಾರಿ ಕೆಲಸವನ್ನೇ ಅವಲಂಬನೆ ಮಾಡಿ ಕುಳಿತುಕೊಳ್ಳಬಾರದು. ಖಾಸಗಿ ಕ್ಷೇತ್ರದಲ್ಲೂ ಈಗ ಉದ್ಯೋಗ ಮಾರುಕಟ್ಟೆ ಬೃಹತಾಗಿ ಬೆಳೆದಿದೆ. ಶಿಕ್ಷಣ ಮುಗಿಸಿದ ನಂತರ ವಿದ್ಯಾರ್ಥಿಗಳು ಏನು ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ಜತೆಗೆ ಉದ್ಯೋಗ ಹುಡುಕುವುದರಲ್ಲಿ ತಲ್ಲೀನರಾಗಿರುತ್ತಾರೆ. ಅಂಥವರಿಗೆ ಈ ಉದ್ಯೋಗ ಮೇಳ ನೆರವಾಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ಶಿವಾನಂದ ಮಠಪತಿ, ಶಿವಶರಣಪ್ಪ ಕುಸನೂರ, ಪ್ರಭುದೇವ ಯಳವಂತಗಿ, ಅಣ್ಣಾರಾವ ಧುತ್ತರಗಾಂವ, ಪರಮೇಶ್ವರ ಶಟಕಾರ, ಸಂಗಮೇಶ ಶಾಸ್ತ್ರಿ ಮಾಶಾಳ, ರವಿಕುಮಾರ ಶಹಾಪುರಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಸೇರಿದಂತೆ ಅನೇಕ ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here