ಬಿಸಿ ಬಿಸಿ ಸುದ್ದಿ

ಅಪ್ಪುಗೌಡರ ಜನ್ಮದಿನದ ನಿಮಿತ್ತ: ಬೃಹತ್ ಉದ್ಯೋಗ ಮೇಳದ ಪ್ರಚಾರಾಂದೋಲನಕ್ಕೆ ಚಾಲನೆ

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಜನ್ಮದಿನದಂಗವಾಗಿ ಶ್ರೀ ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿಗಳ ಬಳಗದ ವತಿಯಿಂದ ಫೆ.೨೮ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಎನ್.ವಿ.ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಉದ್ಯೋಗ ಮೇಳದ ಕುರಿತು ಇಲ್ಲಿನ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳಿಗೆ ತೆರಳಿ ಪ್ರಚಾರಾಂದೋಲನ ನಡೆಸಲಾಯಿತು.

ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯೋಗದ ಸಮಸ್ಯೆ ಯುವಕರನ್ನು ಕಾಡುತ್ತಿದೆ. ಸಾಲ ಮಾಡಿ ಹೆತ್ತವರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿದರೂ ವಿದ್ಯಾವಂತ ಯುವಕರು ಉದ್ಯೋಗವಿಲ್ಲದೇ ತಮ್ಮ ಭವಿಷ್ಯದ ಚಿಂತೆಯಲ್ಲಿಯೇ ದಿನ ದೂಡುವಂತಹ ಸ್ಥಿತಿಯಿದೆ. ಈ ಸಮಸ್ಯೆಗಳನ್ನು ಮನಗಂಡು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಳಿಲು ಸೇವೆ ಎನ್ನುವ ಹಾಗೇ ಈ ಬೃಹತ್ ಉದ್ಯೋಗ ಮೇಳವನ್ನು ರೂಪಿಸಿದ್ದಾರೆ. ಈ ಉದ್ಯೋಗ ಮೇಳದ ಸದುಪಯೋಗವನ್ನು ಈ ಭಾಗದ ಯುವಕರು ಪಡೆದುಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಹಾಗೂ ಸಾಹಿತ್ಯ ಪ್ರೇಮಿ ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿ, ಯುವಕ, ಯುವತಿಯರು ಸರ್ಕಾರಿ ಕೆಲಸವನ್ನೇ ಅವಲಂಬನೆ ಮಾಡಿ ಕುಳಿತುಕೊಳ್ಳಬಾರದು. ಖಾಸಗಿ ಕ್ಷೇತ್ರದಲ್ಲೂ ಈಗ ಉದ್ಯೋಗ ಮಾರುಕಟ್ಟೆ ಬೃಹತಾಗಿ ಬೆಳೆದಿದೆ. ಶಿಕ್ಷಣ ಮುಗಿಸಿದ ನಂತರ ವಿದ್ಯಾರ್ಥಿಗಳು ಏನು ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ಜತೆಗೆ ಉದ್ಯೋಗ ಹುಡುಕುವುದರಲ್ಲಿ ತಲ್ಲೀನರಾಗಿರುತ್ತಾರೆ. ಅಂಥವರಿಗೆ ಈ ಉದ್ಯೋಗ ಮೇಳ ನೆರವಾಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ಶಿವಾನಂದ ಮಠಪತಿ, ಶಿವಶರಣಪ್ಪ ಕುಸನೂರ, ಪ್ರಭುದೇವ ಯಳವಂತಗಿ, ಅಣ್ಣಾರಾವ ಧುತ್ತರಗಾಂವ, ಪರಮೇಶ್ವರ ಶಟಕಾರ, ಸಂಗಮೇಶ ಶಾಸ್ತ್ರಿ ಮಾಶಾಳ, ರವಿಕುಮಾರ ಶಹಾಪುರಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಸೇರಿದಂತೆ ಅನೇಕ ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿಯಲ್ಲಿ ಕೆ.ಇ.ಎ ಪರೀಕ್ಷೆ ಸುಸೂತ್ರ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

38 mins ago

ತಿಪಟೂರು ಕೃಷ್ಣಗೆ ” ಕಾಯಕ ರತ್ನ ಪ್ರಶಸ್ತಿ ” ಪ್ರದಾನ

ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…

45 mins ago

ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಹೃದಯಾಘಾತದಿಂದ ನಿಧನ

ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…

3 hours ago

ಜಲಮೂಲ, ಪರಿಸರ ಸಂರಕ್ಷಣೆಯತ್ತ ಯುವಜನತೆ ಸಕ್ರಿಯರಾಗಲಿ: ಹುಲಿಕುಂಟೆ ಮೂರ್ತಿ

ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…

4 hours ago

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

6 hours ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

6 hours ago