ಶಹಾಬಾದ: ನಗರದ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ನಿರ್ಮಾಣವಾದ ಗುಡಿ-ಗುಂಡಾರಗಳು ಮತ್ತು ಮಸೀದಿಗಳನ್ನು ನಗರಸಭೆಯ ವತಿಯಿಂದ ಸೋಮವಾರ ಬೆಳಿಗ್ಗೆಯಿಂದಲೇ ತೆರವು ಕಾರ್ಯಾಚರಣೆ ಪೊಲೀಸ್ ಬಂದೋಬಸ್ತನಲ್ಲಿ ನಡುವೆ ಭರದಿಂದ ನಡೆಯಿತು.
ತಹಸೀಲ್ದಾರ ಸುರೇಶ ವರ್ಮಾ ಅಧ್ಯಕ್ಷತೆಯಲ್ಲಿ ನಗರಸಭೆಯ ಪೌರಾಯುಕ್ತ ವೆಂಕಟೇಶ ಅವರ ಪಿಐ ಅಮರೇಶ.ಬಿ, ನೇತೃತ್ವದಲ್ಲಿ ೨ ಜೆಸಿಬಿ, ೪ ಟ್ರ್ಯಾಕ್ಟರ್ಗಳ ಮೂಲಕ ನಗರದ ಬಸವೇಶ್ವರ ಬಡಾವಣೆಯಲ್ಲಿರುವ ಅಕ್ರಮವಾಗಿ ಕಟ್ಟಲಾದ ಮಂದಿರಗಳಾದ ಯಲ್ಲಮ್ಮನ ಗುಡಿ, ಚೌಡಯ್ಯನ ಕಟ್ಟೆ, ಮಜೀದ್ ಗಳನ್ನು ತೆರವುಗೊಳಿಸಲಾಯಿತು.
ಸರ್ವೋಚ್ಛ ನ್ಯಾಯಾಲಯದ ಆದೇಶ ಮೇರೆಗೆ ಅಕ್ರಮ ಮಂದಿರ-ಮಸೀದಿಗಳನ್ನು ತೆರವುಗೊಳಿಸುತ್ತಿದ್ದೆವೆ.ಈಗಾಗಲೇ ಈ ಬಗ್ಗೆ ಧಾರ್ಮಿಕ ಮುಖಂಡರ ಜತೆ ಸಭೆ ನಡೆಸಿದ್ದೆವೆ.ಅವರು ಇದಕ್ಕೆ ಸಹಮತ ನೀಡಿ, ಕಾಲಾವಕಾಶ ನೀಡಿದ್ದರು. ಕಾಲಾವಕಾಶ ಮುಗಿದ ಬಳಿಕವೇ ತೆರವುಗೊಳಿಸಿದ್ದೆವೆ.ಇದಕ್ಕೆ ಸಾರ್ವಜನಿಕರು ಸಹಕಾರ ನೀಡಿದ್ದಾರೆ – ವೆಂಕಟೇಶ ಪೌರಾಯುಕ್ತ ನಗರಸಭೆ ಶಹಾಬಾದ.
ಅಲ್ಲದೇ ವಾರ್ಡ ನಂ.೧೨ರಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿರುವ ನಾಗಲಿಂಗೇಶ್ವರ ಮಂದಿರವನ್ನು ತೆರವು ಮಾಡಲಾಯಿತು.ಅಲ್ಲದೇ ಹನುಮಾನ ನಗರದ ಮುಖ್ಯ ರಸ್ತೆಯಲ್ಲಿರುವ ನಾಗಪ್ಪನ ಕಟ್ಟೆಯನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ತೆರವು ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶ ಇರುವುದರಿಂದ ತೆರವು ಕಾರ್ಯಾಚರಣೆ ವೇಳೆ ಯಾರು ಅಡ್ಡಿಪಡಿಸುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ನಿಮ್ಮ ಮಂದಿರಗಳನ್ನು ತೆರವುಗೊಳಿಸುವ ಮುನ್ನ ಧಾರ್ಮಿಕ ಪೂಜಾ ಕಾರ್ಯಗಳನ್ನು ಕೈಗೊಳ್ಳಬಹುದು.ಇಲ್ಲದಿದ್ದರೇ ನಾವೇ ತೆರವುಗೊಳಿಸಿ ತೆಗೆದುಕೊಂಡು ಹೋಗುತ್ತೆವೆ ಎಂದು ಅರಿವು ಮೂಡಿಸಿದರು. ಅದಕ್ಕೆ ವಿರೋಧ ಮಾಡದೇ ಸಾರ್ವಜನಿಕರು ಪೂಜೆ ಮಾಡಿ ಮೂರ್ತಿಗಳನ್ನು ತಮ್ಮ ಮನೆಗೆ ತೆಗೆದುಕೊಂಡು ಹೋದರು.
ಬಸವೇಶ್ವರ ನಗರದ ಮಸೀದಿ ತೆರವುಗೊಳಿಸುವ ಸಂದರ್ಭದಲ್ಲಿ ಜನರು ನಾವೇ ಸ್ವತಃ ಕಟ್ಟಡವನ್ನು ತೆಗೆಯುತ್ತೆವೆ ಎಂದು ಕಟ್ಟಡವನ್ನು ಅರ್ಧದಷ್ಟು ತೆಗೆದರು. ಅವರಿಂದ ಆಗದಿದ್ದಾಗ ಉಳಿದ ಕಟ್ಟಡವನ್ನು ನಗರಸಭೆಯಿಂದ ಜೆಸಿಬಿ ಮೂಲಕ ತೆರವು ಮಾಡಲಾಯಿತು. ಅಲ್ಲದೇ ರಸ್ತೆಯ ಮೇಲೆ ನಿರ್ಮಾಣವಾದ ಕಟ್ಟಡಗಳನ್ನು ಇದೇ ಸಂದರ್ಭದಲ್ಲಿ ತೆಗೆದು ಹಾಕಲಾಯಿತು.
ಈ ತೆರವು ಕಾರ್ಯಾಚರಣೆಯಿಂದ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.ಅಲ್ಲದೇ ನಗರದಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಮುಂದುವರಿಯಲಿದೆ. ಕಂದಾಯ ಅಧಿಕಾರಿ ಸುನೀಲ, ಜೆಇ ಬಸವರಾಜ, ಆರೋಗ್ಯ ನಿರೀಕ್ಷಕ ಶಿವಕುಮಾರ ಹಾಗೂ ನಗರಸಭೆಯ ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…