ಬೈಕ್ ಟಂ ಟಂ ನಡುವೆ ಡಿಕ್ಕಿ ಪಡಿತರ ವಿತರಕ ಡೀಲರ ಸಾವು, ಐವರಿಗೆ ಗಂಭೀರ ಗಾಯ

0
536

ಯಾದಗಿರಿ, ಸುರಪುರ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಬಾರಪೇಠ ಕ್ರಾಸ್ ನಲ್ಲಿ ಇಂದು ರಾತ್ರಿ 8 ಗಂಟೆ ಸುಮಾರಿಗೆ ಟಂ ಟಂ ಮತ್ತು ಮೋಟಾರ್ ಸೈಕಲ್ ನಡುವೆ ಅಪಘಾತ ಸಂಭವಿಸಿ, ಓರ್ವ ಸ್ಥಳದಲ್ಲೆ ಸಾವನಪ್ಪಿದ್ದು, ಐವರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಹೆಬ್ಬಾಳ ಗ್ರಾಮದ ಆದಣಗೌಡ (40) ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ, ಮೃತ ಆದಣಗೌಡ ಹೆಬ್ಬಾಳ ಗ್ರಾಮದಲ್ಲಿ ಪಡಿತರ ವಿತರಣೆ ಡೀಲರಾಗಿದ್ದು, ಯಾದಗಿರಿಯಿಂದ ಹೆಬ್ಬಾಳ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ನಗರದ ಕುಂಬಾರಪೇಟ ಕ್ರಾಸ್ ಹತ್ತಿರ ಸುರಪುರ ದಿಂದ ವೆಂಕಟಾಪುರ ಗ್ರಾಮಕ್ಕೆ ಹೊರಟಿದ್ದ ಟಂ ಟಂ ಆಟೋ ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಆದಣಗೌಡ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಹಿಂಬದಿಯ ಸವಾರ ನಂದನಗೌಡಗೆ ಗಂಭೀರ ಗಾಯವಾಗಿದ್ದು, ಅದೇ ರೀತಿ ಆಟೋದಲ್ಲಿದ್ದ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಪ್ರಯಾಣಿಕರಿಗೂ ಗಾಯವಾಗಿದ್ದು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Contact Your\'s Advertisement; 9902492681

ಸ್ಥಳದಿಂದ ಟಂಟಂ ಚಾಲಕ ಪರಾರಿಯಾಗಿದ್ದು, ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಶವ ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಮೃತರ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here