ಸುರಪುರ: ಕೂಲಿ ಕಾರ್ಮಿಕರು ಅನೇಕ ತಿಂಗಳುಗಳ ಹಿಂದೆಯೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಇದುವರೆಗೂ ಕೂಲಿ ಹಣ ನೀಡದೆ ಸರಕಾರ ಕಾಮಿಕರ ಬದುಕಿಗೆ ಬರೆ ಎಳೆದಿದೆ,ಇದರಿಂದ ಕೂಲಿಕಾರರು ಗುಳೆ ಹೋಗುವ ಪರಸ್ಥಿತಿಗೆ ತಂದ ಸರಕಾರಕ್ಕೆ ಧಿಕ್ಕಾರ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ದಾವಲಸಾಬ ನದಾಫ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ವತಿಯಿಂದ ನಗರದ ತಾಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ಹಮ್ಮಕೊಂಡಿದ್ದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿ, ತಾಲೂಕಿನ ಆಲ್ದಾಳ, ನಾಗರಾಳ, ಬೋನಾಳ, ಏವೂರು ಗ್ರಾಮ ಪಂಚಾಯತಿಗಳು ಸೇರಿ ತಾಲೂಕಿನ ಅನೇಕ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಹಿಂದೆ ದುಡಿದ ಕೂಲಿ ಕಾರ್ಮಿಕರಿಗೆ ಇನ್ನು ಕೂಲಿ ಹಣ ನೀಡಿಲ್ಲ,ಬಡ ಕಾರ್ಮಿಕರ ಬದುಕಿನ ಬಗ್ಗೆ ಸರಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ, ಕಳೆದ ಆರು ತಿಂಗಳಿನಿಂದ ಕಾರ್ಮಿಕರು ಜೀವನ ನಡೆಸಲು ಪರದಾಡುವಂತಾಗಿದೆ ತಕ್ಷಣವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಮಿಕರಿಗೆ ನ್ಯಾಯವದಗಿಸಬೇಕು ಮತ್ತು ಆಲ್ದಾಳ ಪಂಚಾಯತಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ತಕ್ಷಣವೆ ಅಧಿಕಾರಿಗಳು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳೂಂದಿಗೆ ಚರ್ಚಿಸಿ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಹಲವು ಗ್ರಾಪಂಗಳಲ್ಲಿ ಇನ್ನು ಕೂಲಿಕಾರ್ಮಿಕರಿಗೆ ಜಾಬ ಕಾರ್ಡಗಳೆ ಆಗಿಲ್ಲ ಮತ್ತು ಕೂಲಿ ಕಾರ್ಮಿಕರ ದಿನದ ಭತ್ಯೆಯನ್ನು ಆರುನೂರು ರೂಪಾಯಿಗಳ ವರೆಗೆ ಹೆಚ್ಚಿಸಬೇಕು ಮತ್ತು ಇನ್ನಿತರ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಮುಖ್ಯ ಮಂತ್ರಿಯವರಿಗೆ ಬರೆದ ಮನವಿಯನ್ನು ತಾಲೂಕು ಪಂಚಾಯತ ಇಒ ಅಂಬ್ರೇಶಗೆ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಇಒ,ಮೂರು ದಿನಗಳಲ್ಲಿ ಎಲ್ಲರಿಗೂ ಜಾಬ್ ಕಾರ್ಡ್ ಕೊಡಿಸುವುದಾಗಿ ಹಾಗು ಕೂಲಿ ಹಣವನ್ನು ಶೀಘ್ರದಲ್ಲಿ ಕಡಲು ಕ್ರಮ ಕೈಗೊಳ್ಳುವುದಾಗು ಭರವಸೆ ನೀಡಿದ ನಂತರ ಧರಣಿ ನಿಲ್ಲಿಸಲಾಯಿತು.
ಸಂಘದ ತಾಲೂಕು ಅಧ್ಯಕ್ಷ ನಬೀರಸೂಲ್ ನದಾಫ, ರಾಜುದೊಡ್ಮನಿ, ಮಲ್ಲಮ್ಮ ಕೂಡ್ಲಿ, ಕರೆಪ್ಪ ಅಜ್ಜಳ್ಳಿ, ಶರಣಪ್ಪ ಅನ್ಸಾರ, ಲಕ್ಷ್ಮೀ ಕೆಂಗೂರಿ, ರಂಗಂಪ್ಪ್ ನಾಯಕ, ಇಮಾಂಬಿ ದೊಡ್ಮನಿ, ದೇವಕೆಮ್ಮ ನಾಗರಾಳ, ಸಿದ್ದಮ್ಮ ಭಜಂತ್ರಿ, ದುರ್ಗಪ್ಪ ಮಾಲಗತ್ತಿ, ನಿಂಗಣ್ಣ ನಾಟೇಕರ ಸೇರಿದಂತೆ ನೂರಕ್ಕೂ ಹೆಚ್ಚುಜನ ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…