ಕಲಬುರಗಿ: ಶಹಾಬಾದ ರಸ್ತೆಯಲ್ಲಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿಜ್ನಾನ ದಿನ ಆಚರಣೆ ಹಾಗೂ ಶಾಲೆಯ ಆಟದ ಮೈದಾನದ ಗುದ್ದಲಿ ಪೂಜೆಯನ್ನು ಸಿಯುಕೆ ಕುಲಪತಿ ಪೊ.ಎಚ್.ಎಂ.ಮಹೆಶ್ವರಯ್ಯ ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳ ಪ್ರಾರ್ಥನೆಯ ಮೂಲಕ “ವಿಜ್ನಾನ ದಿನ” ಆಚರಣೆಯನ್ನು ಪ್ರಾರಂಭಿಸಲಾಯಿತು.
ಪ್ರಸಿದ್ಧ ವಿಜ್ನಾನಿಗಳಾದ ಡಾ.ಸಿ.ವಿ.ರಾಮನ್, ಥಾಮಸ್ ಅಲ್ವ ಎಡಿಸನ್ ಹಾಗೂ ಎ.ಪಿ,ಜೆ.ಅಬ್ದಲ್ ಕಲಾಂರ ಕುರುತು ಮಕ್ಕಳಿಗೆ ವಿವರಿಸಿದರು. ಯಾವ ರೀತಿ ಥಾಮಸ್ ಅಲ್ವ ಎಡಿಸನ್ ಅವರು ೨೦೦೦ ಸಲ ತಮ್ಮ ಪ್ರಯತ್ನದಲ್ಲಿ ಸೋಲನ್ನು ಅನುಭವಿಸಿದರೂ ಮತ್ತೆ ಪ್ರಯತ್ನ ಮಾಡಿ ಸಾಧನೆಯನ್ನು ಮಾಡಿದರೋ ಅದೇ ರೀತಿ ಮಕ್ಕಳು ಕೂಡ ತಮ್ಮ ಪ್ರಯತ್ನವನ್ನು ನಿಲ್ಲಿಸದೆ ತಮ್ಮ ಜೀವನದಲ್ಲಿ ಮುಂದುವರೆಯಬೇಕು ಎಂದು ಮಕ್ಕಳಿಗೆ ಹೇಳಿದರು.
ನಂತರ ಶಾಲೆಯ ವಿಜ್ನಾನ ಪ್ರಯೋಗಾಲಯ, ಸಮಾಜ ವಿಜ್ನಾನ ಪ್ರಯೋಗಾಯಲ, ಗಣಿತ ಪ್ರಯೋಗಾಲಯಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಆಯಾ ವಿಷಯಕ್ಕೆ ಸಂಬಂಧಪಟ್ಟಂತೆ ಚರ್ಚಿಸಿದರು. ಈ ಕಾರ್ಯಕ್ರಮದಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಮಿ. ದೇವಸ್ಸಿಯವರು, ಶಿಕ್ಷಕ ವೃಂದ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…