ಸುರಪುರ: ಭಾರತೀಯ ಪರಂಪರೆಯಲ್ಲಿ ಆಯುರ್ವೇದಕ್ಕೆ ಪ್ರಮುಖವಾದ ಸ್ಥಾನವಿದೆ.ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಕೇವಲ ವನಸ್ಪತಿ ರೂಪದ ಆಹಾರ ಪದ್ಧತಿಯಿಂದಲೆ ನೂರಾರು ವರ್ಷಗಳು ಆರೋಗ್ಯವಂತರಾಗಿ ಬಾಳಿದ ಇತಿಹಾಸದ ಸಂಗತಿಗಳನ್ನು ನಾವು ಕಾಣಬಹುದಾಗಿದೆ. ಇಂದು ನಮ್ಮ ಮನೆಗಳಲ್ಲಿರುವ ಅನೇಕ ಆಹಾರ ಪದಾರ್ಥದ ವಸ್ತುಗಳೆ ಎಲ್ಲಾ ರೋಗಗಳನ್ನು ಕಳೆಯುವ ಶಕ್ತಿ ಹೊಂದಿವೆ ಎಂದು ಯಾದಗಿರಿ ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿದರು.
ನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯದಲ್ಲಿ ಜಿಲ್ಲಾ ಪಂಚಾಯತಿ ಯಾದಗಿರಿ ಮತ್ತು ಜಿಲ್ಲಾ ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆಯುಷ್ ಸೆಮಿನಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಡಾ: ಎಂ.ಬಿ.ಪಾಟೀಲ ಮಾತನಾಡಿ,ನಮ್ಮ ಮನೆಗಳಲ್ಲಿರುವ ಜೀರಿಗೆ,ಬೆಳ್ಳುಳ್ಳಿ,ಅರಿಷಿಣ,ಮೆಂತೆ ಸೇರಿದಂತೆ ಅನೇಕ ವಸ್ತುಗಳಲ್ಲಿ ಔಷಧಿಯ ಗುಣಗಳಿದ್ದು ಕೆಮ್ಮು ನೆಗಡಿ ಜ್ವರ ತಲೆ ನೋವಿನಂತ ಕಾಯಿಲೆಗಳಿಗೆ ಮನೆ ಮದ್ದಿನಿಂದಲೆ ಪರಿಹಾರ ದೊರೆಯುತ್ತದೆ ಎಂದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿ,ಗಂಗಾಧರ ಸರಾಫ್ ಮಾತನಾಡಿ,ಪ್ರತಿಯೊಬ್ಬ ವ್ಯಕ್ತಿಗೆ ದೈನಂದಿನ ದಿನಚರಿಯ ಬಗ್ಗೆ ಗಮನ ಹರಿಸುವುದು ಅವಶ್ಯವಾಗಿದೆ.ದೈನಂದಿನ ದಿನಚರಿಯ ಮೂಲಕ ಅನೇಕ ಕಾಯಿಲೆಗಳನ್ನು ಬರದಂತೆ ತಡೆಯುವ ಶಕ್ತಿ ಇದೆ.ನಿತ್ಯವು ಬೆಳಿಗ್ಗೆ ನಡಿಗೆ,ಯೋಗ ಮತ್ತು ಸರಿಯಾದ ಸಮಯಕ್ಕೆ ಊಟ,ನಿದ್ದೆ ಇವುಗಳಿಂದ ಯಾವುದೆ ಕಾಯಿಲೆ ಬರದಂತೆ ತಡೆಯಲು ಸಾಧ್ಯವಿದೆ ಎಂದರು.
ಕಾರ್ಯಕ್ರಮವನ್ನು ತಾಲೂಕು ಪಂಚಾಯತಿ ಅಧ್ಯಕ್ಷೆ ಶಾರದಾ ಬಿ.ಬೇವಿನಾಳ ಉದ್ಘಾಟಿಸಿದರು,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಜಿಲ್ಲಾ ಆಯುಷ್ ಅಧಿಕಾರಿ ಪ್ರಕಾಶ ರಾಜಾಪುರ,ವಸತಿ ನಿಲಯದ ಮೇಲ್ವಿಚಾರಕಿ ಚಂದ್ರಕಲಾ,ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಇಬ್ರಾಹಿಂ ವೇದಿಕೆ ಮೇಲಿದ್ದರು. ಮನೋಜ ನಾಯಕ ನಿರೂಪಿಸಿದರು,ಬಸವರಾಜ ನಾಯ್ಕೋಡಿ ಸ್ವಾಗತಿಸಿದರು,ಡಾ: ಸಂಜಯ್ ಕುಲಕರ್ಣಿ ವಂದಿಸಿದರು.ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…