ಕಲಬುರಗಿ: ಇಲ್ಲಿನ ಸಂಗಮೇಶ್ವರ ಮಹಿಳಾ ಮಂಡಳಿಯ 43ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಾಳೆ 10:30 ನಗರದ ಸಂಗಮೇಶ್ವರ ಮಹಿಳಾ ಮಂಡಳಿಯ ಆವರಣದಲ್ಲಿ ನಡೆಯಲ್ಲಿದೆ ಎಂದು ಸಂಘದ ಉಪಾಧ್ಯಕ್ಷ ಡಾ. ಮಹಾದೇವಿ ಮಲಕರಡ್ಡಿ ತಿಳಿದ್ದಾರೆ.
ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚೆಂಬರ್ ಆಫ್ ಕಾಮರ್ಸ್ ಅಧ್ಯಕ್ಷ, ಅಮರನಾಥ ಪಾಟೀಲ ಮಳಿಗೆಗಳಿಗೆ ಅನಾವರಣಗೋಳಿಸಿಲಿದ್ದಾರೆ. ಸಮಾರಂಭದ ಮುಖ್ಯ ಅತಿಥಿ ಕಲಾವಿದೆ ಮೇಘಾ ಪಾಂಡ್ವೆ ಮತ್ತು ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆ ವೈಶಾಲಿ ದೇಶಮುಖ ವಹಿಸಲಿದ್ದಾರೆ. ವಿದುಷಿ ತಾರಾಬಾಂಣು ಕುಲಕರ್ಣಿ, ನರ್ಮದಾ ಕಿಶನರಾವ್ ಚಿಂಚನ್ಸೂರು, ಸ್ವನ್ನಾ ಅಮಿತ್ ದೇಶಪಾಂಡೆ ಅವರಿಗೆ ಸನ್ಮಾನಿಸಲಾಗುವುದೆಂದು ಕಾರ್ಯದರ್ಶಿ ಶೋಭಾ ರಂಜೋಳಕರ್ ತಿಳಿದ್ದಾರೆ.
ಮಧ್ಯಾಹ್ನ 1.30 ರಿಂದ ರಾತ್ರಿ 8.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ವರ್ಣಸಿಂಧು ನಾಟ್ಯ ಕಲಾ ಕೇಂದ್ರ ವಿದ್ಯಾರ್ಥಿಗಳಿಂದ ಭರತ ನಾಟ್ಯ, ವೀರಸಂಗಮ್ಮ ಹುಣಸಿಗಿ ಅವರಿಂದ ಜಾನಪದ ಗೀತೆ, ಶಾರದಾ ಸಂಗೀತ ವಿದ್ಯಾಲಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಮಹಿಳೆಯರಿಂದ ಜಾನಪದ ಗೀತೆ, ಭದ್ಮ ವೇಷ ಸ್ಪರ್ಧೆಗಳು ಮತ್ತು ಕಿರು ನಾಟಕ ನಡೆಯಲಿದ್ದು, ಮೇ ಫ್ಲವರ್ ನರ್ಸರಿ ಮಕ್ಕಳಿಂದ ನೃತ್ಯ ಹಾಗೂ ರಾಮವ್ವ ಬಾಳಾರಿ ಮತ್ತು ಸಂಗಡಿಗಳಿಂದ ಜೋಗತಿ ನೃತ್ಯ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಸಂಘದ ಸಹ ಕಾರ್ಯದರ್ಶಿ ಸಂಧ್ಯಾ ಹೊನಗುಂಟಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…