ಕಲಬುರಗಿ: ಅಂಬೇಡ್ಕರ್ ಅವರ ಹೋರಾಟದ ಪ್ರತಿಫಲವಾಗಿ ಇಂದು ಕೈಯಲ್ಲಿ ಮೈಕ್ ಹಿಡಿದು ಮಾತನಾಡುತ್ತಿದ್ದೇವೆ. ಶೈಕ್ಷಣಿಕವಾಗಿ ಮುಂದೆ ಬಂರುತಿದ್ದೇವೆ. ಮತದಾನ ಹಕ್ಕು, ಮಹಿಳೆಯರಿಗೆ ಆಸ್ತಿಯಲ್ಲಿ ಪಾಲು ಪಡೆಯುತಿದ್ದೇವೆ, ಅವರು ನೀಡಿರುವ ಸಂವಿಧಾನ ರಕ್ಷಣೆ ಮಾಡುವಂತಹ ಕಾಲ ಬಂದಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅವರು ಇಲ್ಲಿನ ಹೇರೂರ ಕೆ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಬೇಡ್ಕರ್ ಪುತ್ಥಳಿ ಕೇವಲ ಉದ್ಘಾಟನೆಗಳಿಗೆ ಸೀಮಿತವಾಗಬಾರದು, ಅವರ ಹೋರಾಟ ಪ್ರತಿದಿನ ನಿಮ್ಮಲ್ಲಿ ಹರಿದಾಡುತ್ತಿರಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಅವರ 56 ವರ್ಷಗಳ ಹೋರಾಟದ ಫಲವಾಗಿ ನಾವು ಇಂದು ಮುಂದೆ ಬರಲು ಸಾಧ್ಯವಾಗಿದೆ. ಮೀಸಲಾತಿಯಿಂದ ಸಾಕಷ್ಟು ನೌಕರಿಗಳನ್ನು ಪಡೆದಿದ್ದೇವೆ, ನಾವು ಎಷ್ಟು ನೆನೆಸಿಕೊಂಡರೂ ಕಡಿಮೆ, ಅವರ ಹೋರಾಟ ಕೇವಲ ಶೋಷಿತರಿಗೆ ದಲಿತರಿಗೆ ಸೀಮಿತವಾಗಿರಲಿಲ್ಲ. ಎಲ್ಲ ಸಮುದಾಯದ ಏಳಿಗೆ ದೂರದೃಷ್ಠಿ ಇಟ್ಟುಕೊಂಡಿದ್ದರು. ಅವರೊಬ್ಬ ಆರ್ಥಿಕ ತಜ್ಞರು ಕೂಡ ಆಗಿದ್ದರು. 1932 ರಲ್ಲಿ ರಿಜರ್ವ್ ಬ್ಯಾಂಕ್ ಆಪ್ ಇಂಡಿಯಾ ಸ್ಥಾಪನೆ ಮಾಡಿದರು ಎಂದು ತಿಳಸಿದರು.
ಬಸವಣ್ಣನವರು ಮಹಿಳೆಯರಿಗೆ ಅನುಭವ ಮಂಟಪದ ಮೂಲಕ 12 ನೇ ಶತಮಾನದಲ್ಲಿಯೇ ಸಮಾನತೆಗಳನ್ನು ನೀಡಲು ಹೋರಾಡಿದ್ದರು. ಬಳಿಕ ಅದನ್ನೇ ಡಾ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿ ಜಾರಿಗೆ ತರುವ ಕಾರ್ಯಮಾಡಿದರು ಎಂದರು.
ಬಹುವರ್ಷಗಳ ಹೋರಾಟದಿಂದ ಇಂದು ಈ ಗ್ರಾಮದಲ್ಲಿ ಪುತ್ಥಳಿ ಉದ್ಘಾಟಿಸಲಾಗುತ್ತಿದೆ ಅಂಬೇಡ್ಕರ್ ಅವರ ಹೋರಾಟದ ಇತಿಹಾಸ ಹೊಸ ಪೀಳಿಗೆಗೆ ತಿಳಿಸುವುದು ಅಗತ್ಯವಾಗಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ,ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಅಲ್ಲಮಪ್ರಭು ಪಾಟೀಲ್, ಶಾಸಕ ಎಂ.ವೈ ಪಾಟೀಲ ಬುದ್ಧವಿಹಾರದ ಗುರುಗಳು ಸೇರಿದಂತೆ ದಲಿತ ಮುಖಂಡರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…