ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ 165 ಗ್ರಾಮಗಳಿಗೆ ಸಾರ್ವಜನಿಕ ರುದ್ರಭೂಮಿಗಾಗಿ ಜಮೀನು ಕಾಯ್ದಿರಿಸಲು ಸರ್ಕಾರಿ ಜಮೀನು ಗುರುತಿಸಿ ಪ್ರಸ್ತಾವಣೆ ಸಲ್ಲಿಸಲು ಹಾಗೂ ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಲ್ಲಿನ ಜನಸಂಖ್ಯೆಗೆ ಆಧಾರಿತದ ಮೇಲೆ ಖಾಸಗಿ ಜಮೀನನ್ನು ಗುರುತಿಸಿ ಸಾರ್ವಜನಿಕ ರುದ್ರಭೂಮಿಗಾಗಿ ಭೂಮಿ ಖರೀದಿಸಲು ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲೆಯ ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 629 ಗ್ರಾಮಗಳಿವೆ ಇವುಗಳ ಪೈಕಿ 34 ಬೇಚಾರಾಕ್ ಗ್ರಾಮಗಳಿವೆ.ಈ ಬೇಚಾರಾಕ್ ಗ್ರಾಮಗಳನ್ನು ಹೊರತು ಪಡಿಸಿ ಉಳಿದ 594 ಗ್ರಾಮಗಳ ಪೈಕಿ ಸಾರ್ವಜನಿಕ ರುದ್ರಭೂಮಿ ಇಲ್ಲದೆ ಇರುವ ಗ್ರಾಮಗಳನ್ನು ಪರಿಶೀಲಿಸಲಾಗಿದೆ. ಕೊಪ್ಪಳ ತಾಲೂಕಿನ 78, ಗಂಗಾವತಿ ತಾಲ್ಲೂಕಿನ 53, ಕುಷ್ಟಗಿ ತಾಲ್ಲೂಕಿನ 57,ಯಲಬುರ್ಗಾ ತಾಲ್ಲೂಕಿನ 31, ಕುಕನೂರ ತಾಲ್ಲೂಕಿನ 39, ಕನಕಗಿರಿ ತಾಲ್ಲೂಕಿನ 23, ಕಾರಟಗಿ ತಾಲ್ಲೂಕಿನ 25 ಗ್ರಾಮಗಳು ಸೇರಿದಂತೆ ಒಟ್ಟು 306 ಗ್ರಾಮಗಳಲ್ಲಿ ಈಗಾಗಲೇ ಸರ್ಕಾರಿ ಜಮೀನಿನಲ್ಲಿ ಸಾರ್ವಜನಿಕ ರುದ್ರಭೂಮಿಗಾಗಿ ಜಮೀನನ್ನು ಹಾಗೂ ಕೊಪ್ಪಳ ತಾಲ್ಲೂಕಿನ ಎರಡು ಗ್ರಾಮಗಳಲ್ಲಿ ಹಾಗೂ ಗಂಗಾವತಿ ತಾಲ್ಲೂಕಿನ ಒಂದು ಗ್ರಾಮದಲ್ಲಿ ಪಟ್ಟಾ ಜಮೀನನ್ನು ಖರೀದಿಸಿ ಒಟ್ಟು 309 ಗ್ರಾಮಗಳಲ್ಲಿ 615 ಎಕರೆ 18 ಗುಂಟೆ ಜಮೀನನ್ನು ಸಾರ್ವಜನಿಕ ರುದ್ರಭೂಮಿಗಾಗಿ ಕಾಯ್ದಿರಿಸಿ ಉಪಯೋಗಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಬಾಕಿ ಉಳಿದ 285 ಗ್ರಾಮಗಳ ಪೈಕಿ 120 ಗ್ರಾಮಗಳಲ್ಲಿ ಸಾರ್ವಜನಿಕ ರುದ್ರಭೂಮಿಗಾಗಿ ಜಮೀನನ್ನು ಕಾಯ್ದಿರಿಸಲು ತಹಶೀಲ್ದಾರರು ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಪ್ರಸ್ತಾವನೆಗಳನ್ವಯ ಸಾರ್ವಜನಿಕ ರುದ್ರಭೂಮಿಗಾಗಿ ಕಾಯ್ದಿರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…