ವಿಷಪೂರಿತ ಹುಳು ಕಚ್ಚಿ ಬಾಲಕಿ ಸಾವು: ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಆಕ್ರೋಶ

0
66

ಕಲಬುರಗಿ: ಸೇಡಂ ತಾಲ್ಲೂಕಿನ ರಂಜೋಳ ಗ್ರಾಮದ 11ವರ್ಷದ ಬಾಲಕಿಯೋರ್ವಳು ವಿಷಪೂರಿತ ಹುಳು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.

ಐಶ್ವರ್ಯ ಮಲ್ಲಪ್ಪ ಸಾವನ್ನಪ್ಪಿವ ಬಾಲಕಿ, ಶನಿವಾರದಂದು ಹುಳು ಕಚ್ಚಿದ್ದು, ಅಂದೇ ಸೇಡಂ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಲಬುರಗಿ ಆಸ್ಪತ್ರೆಗೆ ಕಳುಹಿಸಿದ್ದು, ನಿನ್ನೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಸೇಡಂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ತಮ್ಮ ಮಗಳು ಸಾವನ್ನಪ್ಪಿದ್ದಾಳೆಂದು ಪಾಲಕರು ಮತ್ತು ಸ್ಥಳೀಯರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಆಸ್ಪತ್ರೆಯಲ್ಲಿ ಸೂಕ್ತ ಸ್ಪಂದನೆ ಸಿಗಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಇದ್ದರೂ ಕಳಿಸಲಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ,  ಬಾಲಕಿಯ ಸಾವಿಗೆ ಕಾರಣರಾದ ವೈದ್ಯೆಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಪಿಎಸ್‌ಐ ಸುಶೀಲ್​​ ಕುಮಾರ್ ಸಂಧಾನಕ್ಕೆ ಯತ್ನಿಸಿದರು ಮಣಿಯದೆ ಪೋಷಕರು, ಆಸ್ಪತ್ರೆ ಮುಂಭಾಗದಲ್ಲಿ ಧರಣಿ ನಡೆಸಿರೆ‌ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here