ಟೀಚಿಂಗ್ ಎಕ್ಸಲೆನ್ಸ್ ವಿಥ್ ಎನ್.ಎಲ್.ಪಿ ಒಂದು ದಿನದ ಕಾರ್ಯಾಗಾರ

ಸಿಂದಗಿ: ಆಂತರ್ಯ ವಿಜ್ಞಾನದ ರಹಸ್ಯವನ್ನರಿತು (ಎನ್ ಎಲ್ ಪಿ) ನ್ಯೂರೊ ಲಿಂಗ್ವಿಸ್ಟಿಕ್ ಪ್ರೋಗ್ರಾಮಿಂಗ್ ತಿಳಿದುಕೊಂಡು ಪಾಠ ಮಾಡಿದರೆ ವಿದ್ಯಾರ್ಥಿಗಳಲ್ಲಿ ಉತ್ತಮ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಬಹುದಾಗಿದೆ ಎಂದು ಬೆಂಗಳೂರಿನ ಟ್ರಾನ್ಸ್‌ಫಾರ್ಮೋ ಇನ್‌ಕಾರ್ಪ್ ತರಬೇತಿ ಸಂಸ್ಥೆಯ ಮನೋತಜ್ಞ  ಹಾಗೂ ಶೈಕ್ಷಣಿಕ ತಜ್ಞ ಭುಜಬಲಿ ಬೋಗಾರ್ ಹೇಳಿದರು.

ಇಂದು ಸಿಂದಗಿ ಪಟ್ಟಣದ ಜಿ.ಪಿ.ಪೋರವಾಲ್ ಕಲಾ,ವಾಣಿಜ್ಯ ಮತ್ತು ವಿವಿ ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಟೀಚಿಂಗ್ ಎಕ್ಸಲೆನ್ಸ್ ವಿಥ್ ಎನ್.ಎಲ್.ಪಿ ಅನ್ನುವ ಒಂದು ದಿನದ ಕಾರ್ಯಾಗಾರ ನಡೆಸಿಕಟ್ಟ ಭುಜಬಲಿ ಅವರು,ವಿದ್ಯಾರ್ಥಿಗಳಲ್ಲಿನ ವಿಶೇಷ ಕೌಶಲ್ಯಗಳನ್ನು ಗುರ್ತಿಸಿ ಅವರಲ್ಲಿನ ಪ್ರತಿಭೆ ಹೊರತೆಗೆಯುವ ಕೆಲಸ ಉಪನ್ಯಾಸಕರಿಂದಾಗಬೇಕಾಗಿದೆ. ಹಾಗಾಗಿ ಉಪನ್ಯಾಸಕರುತಮ್ಮ ವ್ಯಕ್ತಿತ್ವವನ್ನು ಪ್ರಭಾವಶಾಲಿ ಹಾಗೂ ಮಾದರಿಯಾಗಿಸಿಕೊಳ್ಳಲು ಪರಿಣಾಮಕಾರಿ ಬೋಧನೆಗೆ ಈ ರೀತಿಯ ತರಬೇತಿ ಕಾರ್ಯಾಗಾರಗಳು ಅತ್ಯವಶ್ಯಕವಾಗಿವೆ ಎಂದು ಹೇಳಿದರು.

ಉಪನಸ್ಯಾಸಕರಿಗಾಗಿ ಟೀಚಿಂಗ್ ಎಕ್ಸಲೆನ್ಸ್ ವಿಥ್ ಎನ್.ಎಲ್.ಪಿ ಅನ್ನುವ ಕಾರ್ಯಾಗಾರ ಶಿಬಿರವನ್ನು ಆಯೋಜಿಸಿದ್ದು ಬಹಳ ಸೂಕ್ತ ಮತ್ತು ಅತಿ ಅವಶ್ಯಕವಾಗಿದೆ. ತರಬೇತಿ ನೀಡಲು ಬೆಂಗಳೂರಿನಿಂದ ಆಗಮಿಸಿದ ಮನೋತಜ್ಞ ಹಾಗೂ ಶೈಕ್ಷಣಿಕ ತಜ್ಞ, ಭುಜಬಲಿ ಬೋಗಾರ ಅವರಿಗೂ ನಾನು ಅಭಿನಂದನೆ ಹೇಳುತ್ತೇನೆ, ಉಪನ್ಯಾಸಕವರ್ಗದವರಾದ ತಾವೆಲ್ಲರೂ ಈ ತರಬೇತಿ ಶಿಬಿರದ ಸದುಪಯೋಗ ಪಡೆದು ಅತ್ಯುತ್ತಮ ಉಪನ್ಯಾಸಕರಾಗಿ ಕಾರ್ಯರ್ನಿಹಿಸಿ.

ಆವಾಗಲೇ ಡಾ.ಏ.ಪಿ,ಜೆ.ಅಬ್ದುಲ್ ಕಲಾಂ ಅವರ ಭಾರತವನ್ನು ಒಂದು ವಿಶ್ವಶಕ್ತಿ ದೇಶವನ್ನಾಗಿ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಮೌನಯೋಗಿ ಫೌಂಡೇಶನ್ನಿನ ಸಂಸ್ಥಾಪಕ ಅಧ್ಯಕ್ಷರಾದ ಶ್ರಾವಣಯೋಗಿ ಹಿರೇಮಠ ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ.ಆರ್.ಎಸ್.ಬುಶೆಟ್ಟಿ, ಐಕ್ಯುಎಸಿ ಸಂಯೋಜಕರಾದ ಡಿ.ಎಂ.ಪಾಟೀಲ್ ,ಪ್ರಾದ್ಯಾಪಕ ಎಂ.ಆರ್.ರೂಡಗಿ ಆಡಳಿತ ಮಂಡಳಿ ಸದಸ್ಯರು,ಉಪಾಧ್ಯಕ್ಷರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420