ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಹೋದರರ ಸಾವು

0
41

ಕಲಬುರಗಿ: ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಇಂದು ನಡೆದಿದೆ.

ಬಸಣ್ಣ ಶಂಕ್ರಪ್ಪ(25), ನಾಗಣ್ಣ ಶಂಕ್ರಪ್ಪ -18ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರಿಬ್ಬರು ಸಹೋದರು ಎಂದು ತಿಳಿದುಬಂದಿದ್ದು, ಪ್ರತಿದಿನದಂತೆ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ ಇಬ್ಬರು ಸಹೋದರು ಶವವಾಗಿ ಸಿಕ್ಕಿದ್ದಾರೆ.

Contact Your\'s Advertisement; 9902492681

ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿದ್ದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here