ವಾಡಿ: ಗರ್ಭಿಣಿ ಮಹಿಳೆಯರು ಪೌಷ್ಠಿಕ ಆಹಾರ ಸೇವೆನೆಗೆ ಹೆಚ್ಚಿನ ಅಧ್ಯತೆ ಕೊಡಬೇಕು. ತಾಯಿ ಆರೋಗ್ಯವಾಗಿದ್ದರೆ ಮಾತ್ರ ಜನಿಸುವ ಶಿಶು ಶಾರೀರಿಕವಾಗಿ ಸದೃಢವಾಗಿರುತ್ತದೆ ಎಂದು ಮಾರ್ಗದರ್ಶಿ ಸಂಸ್ಥೆಯ ಮಕ್ಕಳ ಸಹಾಯವಾಣಿ ತಂಡದ ಸದಸ್ಯ ಆನಂದ ಶರ್ಮಾ ಹೇಳಿದರು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಪಟ್ಟಣದ ವಾರ್ಡ್ ೧೧ರ ಕಲಕಂ ಏರಿಯಾದ ಅಂಗನವಾಡಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಪೌಷ್ಠಿಕ ಆಹಾರ ಶಿಬಿರ ಹಾಗೂ ಪೋಷಣ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಪೌಷ್ಠಿಕತೆಯಿಂದ ರಕ್ತಹೀನತೆ ಉಂಟಾಗುತ್ತದೆ. ತರಕಾರಿ, ಕಾಳುಪಲ್ಲೆ ಮತ್ತು ಬೇಯಿಸಿದ ಮೊಟ್ಟೆಯಂತಹ ಪೌಷ್ಠಿಕ ಆಹಾರವನ್ನು ನಿತ್ಯವೂ ಸೇವಿಸುವುದರಿಂದ ಗರ್ಭದೊಳಗೆ ಮಗುವಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಅಂಗವಿಕಲ ಮತ್ತು ಅಪೌಷ್ಠಿಕ ಮಕ್ಕಳ ಜನನ ಪ್ರಮಾಣ ತಗ್ಗಿಸಲು ಸರಕಾರ ಮಹತ್ವದ ಯೋಜನೆಗಳನ್ನು ಅಂಗನವಾಡಿ ಕೇಂದ್ರಗಳ ಮೂಲಕ ಸಾಕಾರಗೊಳಿಸುತ್ತಿದೆ. ಗರ್ಭಿಣಿ ಸ್ತ್ರೀಯರು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ಮಠಪತಿ, ಆರೋಗ್ಯವಂತ ಕುಟುಂಬ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ನಾವು ಪೌಷ್ಠಿಕ ಆಹಾರಗಳ ಕುರಿತು ತಿಳಿದುಕೊಳ್ಳುವುದು ಇಂದಿನ ಅಗತ್ಯವಾಗಿದೆ. ಪೋಷಕಾಂಶಗಳಿರುವ ಊಟ ನಮ್ಮ ಆರೋಗ್ಯವನ್ನು ವೃದ್ಧಿಗೊಳಿಸುತ್ತದೆ. ಪೌಷ್ಠಿಕವಲ್ಲದ ಆಹಾರ ನಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ. ಹಸಿ ತರಕಾರಿ, ಹಣ್ಣು, ಧಾನ್ಯಗಳ ಪದಾರ್ಥ ಸೇವನೆ ಮಹಿಳೆಯರ ದೇಹಕ್ಕೆ ಅತ್ಯಂತ ಉತ್ತಮ ಎಂದರು. ಈ ಸಂದರ್ಭದಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಸೇವಿಸಬೇಕಾದ ತರಕಾರಿ, ಹಣ್ಣು, ಧಾನ್ಯಗಳನ್ನು ಪ್ರದರ್ಶಿಸಿ ವಿವರಿಸಲಾಯಿತು. ಮಕ್ಕಳ ತೂಕ ಪರೀಕ್ಷಿಸುವ ಮೂಲಕ ಬಾಣಂತಿಯರಿಗೆ ಪೌಷ್ಠಿಕ ಆಹಾರ ಪದಾರ್ಥ ವಿತರಿಸಲಾಯಿತು. ಬಡಾವಣೆಯ ನೂರಜಾಹಬೇಗಂ ಸೇರಿದಂತೆ ಗರ್ಭಿಣಿಯರು ಹಾಗೂ ಬಾಣಂತಿಯರು ಪಾಲ್ಗೊಂಡಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…