ಬಿಸಿ ಬಿಸಿ ಸುದ್ದಿ

ಕ್ಷಯಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ: ಕಂಬಳಿಮಠ ಸಲಹೆ

ಕಲಬುರಗಿ: ಭಾರತ ಸರ್ಕಾರದ ಆಶಯದಂತೆ 2025ರ ಹೊತ್ತಿಗೆ ಕ್ಷಯ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಆರೋಗ್ಯ ಇಲಾಖೆ ಜೊತೆಗೆ ಪ್ರತಿ ಒಬ್ಬರು ಸಮಾಜಿಕ ಕಳಕಳಿಯಿಂದ ನಮ್ಮೊಂದಿಗೆ ಸರ್ವರಿಗೂ ಅರಿವು ಮೂಡಿಸಲು ಕೈ ಜೋಡಿಸಬೇಕು   ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ  ಜಿಲ್ಲಾ ಡಿ ಅರ್ ಟಿ ಬಿ . ಟಿ ಐ ಎಸ್ ಎಸ್. ಸಮಾಲೋಚಕ  ಮಂಜುನಾಥ ಕಂಬಾಳಿಮಠ  ಹೇಳಿದರು.

ಕಮಾಲಪೂ ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ ಸಭಾಂಗಣದಲ್ಲಿ . ನೆಹರು ಯುವ ಕೇಂದ್ರ ಕಲಬುರಗಿ, ಹಾಗೂ   ಪ್ರಯಾಗ್  ಮತ್ತು ಸಹಾರ ಯುವತಿ. ದಿಶಾ ಯುವಕ ಸಂಘ , ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ ಕಮಲಪೂರ, IQAC,ರೆಡ್ ಕ್ರಾಸ್‌, ಯೂಥ್ ವಿಂಗ್, ಎನ್ ಎಸ್ ಎಸ್, ಘಟಕ  . ಇವರ ಸಂಯುಕ್ತಾಶ್ರದಲ್ಲಿ. ಯುವ ನಾಯಕತ್ವ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಗಾರ ಕಾರ್ಯಕ್ರಮದ ಕಾಲೇಜಿನ ವಿದ್ಯಾರ್ಥಿಗಳಿಗೆ . ಎರಡನೇ ದಿನದ ಕಾರ್ಯಗಾರ ಕಾರ್ಯಕ್ರಮದಲ್ಲಿ.

ಅರೋಗ್ಯ ದ ಬಗ್ಗೆ ಅರಿವು ಮೂಡಿಸಬೇಕಾಗಿದೆ, ಒಬ್ಬ ವಿದ್ಯಾರ್ಥಿಗೆ ಗುರಿ ಎಷ್ಟು ಮುಖ್ಯವೊ ಅಷ್ಟೇ ಮುಖ್ಯ ನಮ್ಮ ಆರೋಗ್ಯ ಕೂಡ ಈ ಹಿನ್ನೆಲೆಯಲ್ಲಿ ಆರೋಗ್ಯದ ಕಡೆ ವಿದ್ಯಾರ್ಥಿಗಳು ಗಮನವಹಿಸಬೇಕು ,  ವಿಶೇಷವಾಗಿ ” ವಿಶ್ವ ಕ್ಷಯರೋಗ ದಿನ 24 ಮಾರ್ಚ್ ” ಅಂಗವಾಗಿ  ವಿದ್ಯಾರ್ಥಿಗಳಿಗೆ ಕ್ಷಯರೋಗ ಬಿತ್ತಿ ಪತ್ರ ಓದುವ ಮೂಲಕ ಜಾಗೃತಿ ನೀಡಿದ ನಂತರ ಹೆಮ್ಮರಿಯಂತೆ ಚೀನಾ ದೇಶದಲ್ಲಿ ಹರಡಿದ ಕಾರೊನಾ ವೈರಸ್.. ದಿನೆ ದಿನೆ ಹೆಚ್ಚಾಗಿ ಹಬ್ಬುತಿದ, ಇದರ ಬಗ್ಗೆ  ಎಚ್ಚರಿಕೆಯಿಂದ ಇರಬೇಕಾಗುತ್ತದೆ ಇದರ ಬಗ್ಗೆ ಮುಂಜಾಗ್ರತಾ ಕ್ರಮದಿಂದ ಇರಲು , ಉತ್ತಮ ಆರೋಗ್ಯದ ಹೊರತು ಉತ್ತಮ ಜೀವನ ಸೃಷ್ಟಿಸಿಕೊಳ್ಳು ಸಾಧ್ಯವಿಲ್ಲ,ಎಂದು ಮಾಹಿತಿ ನಿಡಿದರು.

ತಾಲ್ಲೂಕ ಹಿರಿಯ  ಕ್ಷಯರೋಗ ಮೇಲ್ವಿಚಾರಕ ಶಿವಕುಮಾರ್ ಪಾಟೀಲ್  ಮಾತನಾಡುತ್ತಾ , ವಿದ್ಯಾರ್ಥಿಗಳಿಗೆ ಕ್ಷಯರೋಗ ಲಕ್ಷಣಗಳ ಬಗ್ಗೆ ವಿವರಿಸುತ್ತ  ಕ್ಷಯರೋಗಿಗಳು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ, ಹಾಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದೆ ಇದ್ದರೆ. ಒಬ್ಬ ಕ್ಷಯರೋಗಿ ಚಿಕಿತ್ಸೆ ಪಡೆಯದೇ  ಇದ್ದರೆ ಒಂದು ವರ್ಷದಲ್ಲಿ ಹತ್ತು ರಿಂದ ಹದಿನೈದು ಜನರಿಗೆ ಹರಡಿಸಬಲ್ಲ, ಹಾಗೆ ಇದರ ಲಕ್ಷಣಗಳು ಎರಡು ವಾರಗಳಿಗೂ ಮೇಲ್ಪಟ್ಟು ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಎದೆ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು,ಕಫದ ಜೊತೆ ರಕ್ತ ಬೀಳುವುದು. ಈ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯ ಸಲಹೆ ಪಡೆದು. ಹಾಗೆ ಲ್ಯಾಬೋರೇಟರಿಯಲ್ಲಿ ಕಫದ ಮಾದರಿ ಪರೀಕ್ಷೆ  ಕೇಂದ್ರ ಮಾಡಿಸಲು ಉಚಿತವಾಗಿದೆ ಎಂದು ತಿಳಿಸಿದರು. ಕ್ಷಯರೋಗಿ ಎಂದು ಧೃಡಪಟ್ಟಲ್ಲಿ ಅವರಿಗೆ ಪೂರ್ಣ ಪ್ರಮಾಣದ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಹಾಗೆ ಕ್ಷಯರೋಗಿಗೆ ಪ್ರತಿ ತಿಂಗಳು  ನಿಕ್ಷಯ ಪೋಷಣ  ಯೋಜನೆಯಡಿ 500 ರೂ.ಗಳ  ಸಹಾಯಧನ  ನೆರೆ ಅವರ ಬ್ಯಾಂಕ್ ಅಕೌಂಟ್ ಗೆ ನೀಡಲಾಗುತ್ತದೆ,  ಎಂದು ಹೇಳಿದರು.

ಪತಂಜಲಿ ಯೋಗ ಸಾಧಕ  ರಾಮಕೃಷ್ಣ ಅವರು ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗ್ಯಭ್ಯಾಸ ಮಾಡಸಿ ಅದರ ಉಪಯುಕ್ತ ಮಾಹಿತಿ ಏಕಾಗ್ರತೆ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಶಾಂತ ಅಷ್ಟಾಗಿ, ಡಾ. ಶಿಲ್ಪ ಗಾಂವಕರ್. ಡಾ. ರಾಜಶೇಖರ, ಪ್ರೊ ಶರಣು ಚಿಕ್ಕಳಿ, ದಯಾನಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು .

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago