ಬಿಸಿ ಬಿಸಿ ಸುದ್ದಿ

ಕುಂಬಾರಪೇಟ: ಸಾಲ ಬಾಧೆಗೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಯಾದಗಿರಿ,ಸುರಪುರ: ಸಾಲ ಬಾಧೆಗೆ ಬೇಸತ್ತು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಂಬಾರಪೇಟೆಯಲ್ಲಿ ನಡೆದಿದೆ.

ಕುಂಬಾರಪೇಟೆಯ ರೈತ ತಿರುಮಣ್ಣ ಯಲ್ಲಪ್ಪ ಕವಲಿ (೫೩ ವರ್ಷ) ಮೃತ ದುರ್ದೈವಿಯಾಗಿದ್ದು.ಮೃತ ರೈತನಿಗೆ ೧ ಎಕರೆ ಸ್ವಂತ ಜಮೀನು ಹಾಗು ಮೂರು ಎಕರೆ ಪಿತ್ರಾರ್ಜಿತ ಜಮೀನಿದ್ದು,ಈ ಮೂರು ಎಕರೆಯಲ್ಲಿ ಮೃತನ ಮೂರು ಜನ ಸಹೋದರರು ಪಾಲುದಾರರಾಗಿದ್ದಾರೆ.

ಇನ್ನುಳಿದಂತೆ ೩ ಎಕರೆ ಬೇರೆಯವರ ಜಮೀನು ಲೀಜಿಗೆ ಪಡೆದು ವ್ಯವಸಾಯ ಮಾಡಿಕೊಂಡಿದ್ದು,ಸತತ ಬರಗಾಲದಿಂದ ನೊಂದ ರೈತರಂತೆ ಮೃತ ತಿರುಮಣ್ಣ ಕೂಡ ಖಾಸಗಿಯವರ ಬಳಿಯಲ್ಲಿ ಸುಮಾರು ೪ ಲಕ್ಷ ರೂಪಾಯಿ ಸಾಲ ಪಡೆದಿದ್ದು ತೀರಿಸಲಾಗದೆ ನಿತ್ಯವು ಚಿಮತಿಸುತ್ತಿದ್ದನು.ಸಾಲಕ್ಕೆ ಹೆದರದಂತೆ ಮೃತನ ಕುಟುಂಬಸ್ಥರು ಧೈರ್ಯ ಹೇಳಿದರು ನೊಂದ ರೈತ ಸಾಲಕ್ಕೆ ಹೆದರಿ ದಿನಾಂಕ ೦೭ರ ಶನಿವಾರ ಸಂಜೆ ಮನೆಯಲ್ಲಿದ್ದ ಕ್ರಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ಸುರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಕರಣವನ್ನು ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ನಾವೆಲ್ಲ ರೈತರು ಸಾಲದಿಂದ ನಿತ್ಯವು ನರಳುತ್ತಿದ್ದೆವೆ. ಇಂದು ತಿರುಮುಣ್ಣ ನಾಳೆ ಇನ್ಯಾರೊ ಅನ್ನೊ ಸ್ಥಿತಿಯಲ್ಲಿದ್ದೆವೆ.ಆದರೆ ಸರಕಾರಗಳು ಮಾತ್ರ ಮೊಸಳೆ ಕಣ್ಣಿರು ಹಾಕುವ ನಾಟಕ ಮಾಡುತ್ತಿವೆ.

ತಿರುಮಣ್ಣನ ಕುಟುಂಬಕ್ಕೆ ಈಗ್ಯಾರು ದಿಕ್ಕು ಎನ್ನುವುದನ್ನು ಸರಕಾರ ಗಂಭೀರವಾಗಿ ಯೋಚಿಸಬೇಕಿದೆ.ಅಲ್ಲದೆ ಸರಕಾರ ತಿರುಮಣ್ಣನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ಪರಿಹಾರ ನೀಡಬೇಕೆಂದು ಹಾಗು ರಾಜ್ಯದ ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago