ಶೋಭಾಯಾತ್ರೆ ಮೆರವಣಿಗೆಯೊಂದಿಗೆ ಕಣ್ವಮಠ ಯತಿಗಳ ಪುರಪ್ರವೇಶ

ಸುರಪುರ: ತಾಲೂಕಿನ ವೀರಘಟ್ಟ ಹುಣಸಿಹೊಳೆಯ ಪ್ರಸ್ತುತ ಪೀಠಾಧೀಶರಾದ ವಿದ್ಯಾಕಣ್ವ ವಿರಾಜತೀರ್ಥ ಯತಿಗಳ ಪುರಪ್ರವೇಶ ಹಾಗೂ ಶೋಭಾಯಾತ್ರೆ ಮೆರವಣಿಗೆ ನಗರದಲ್ಲಿ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ ನಗರಕ್ಕೆ ಆಗಮಿಸಿದ ಯತಿಗಳನ್ನು ವೇದಘೋಷ, ಭಜನೆ ಹಾಗೂ ಮಂಗಲವಾದ್ಯಗಳೊಂದಿಗೆ ನಗರದ ರಾಜಬೀದಿಗಳಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು ನಂತರ ಅರಮನೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸುರಪುರ ಸಂಸ್ಥಾನರ ಅರಸು ವಂಶಸ್ಥರಾದ ರಾಜಾ ಕೃಷ್ಣಪ್ಪ ನಾಯಕ ಹಾಗೂ ಪರಿವಾರದವರು ದರ್ಬಾರನಲ್ಲಿ ಯತಿಗಳ ಪಾದಪೂಜೆಯನ್ನು ನೆರವೇರಿಸಿದರು, ಸಂಸ್ಥಾನದ ರಾಜಪುರೋಹಿತರಾದ ರಾಘವೇಂದ್ರಾಚಾರ್ಯ ಜಹಾಗೀರದಾರ ಅವರು ಪೂಜಾ ಕೈಂಕರ್ಯ ನಡೆಸಿಕೊಟ್ಟರು, ನಂತರ ದರಬಾರ ದಿಂದ ನಗರದ ಪ್ರಮುಖ ರಸ್ತೆಗಳ ಮೂಲಕ ಬಸ್ ನಿಲ್ದಾಣದ ಬಳಿ ಶ್ರೀಕೃಷ್ಣದ್ವೈಪಾಯನ ತೀರ್ಥರ ಮಠದವರೆಗೆ ವಿದ್ಯಾಕಣ್ವ ವಿರಾಜತೀರ್ಥ ಶ್ರೀಪಾದಂಗಳವರ ಶೋಭಾಯಾತ್ರೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ನಂತರ ವಿದ್ಯಾಕಣ್ವ ವಿರಾಜತೀರ್ಥ ಶ್ರೀಗಳಿಂದ ಶ್ರೀಕೃಷ್ಣದ್ವೈಪಾಯನ ತೀರ್ಥರ ವೃಂದಾವನಕ್ಕೆ ಸಂಪ್ರೋಕ್ಷಣ ಕಾರ್ಯಕ್ರಮ ನಡೆಯಿತು ನಂತರ ಬೃಂದಾವನ ಹಾಗೂ ಕಣ್ವಮಠ ಸಂಸ್ಥಾನದ ಪೂಜೆ ನೆರವೇರಿಸಿದರು, ನಂತರ ನೈವೇದ್ಯ ಹಾಗೂ ಅನ್ನ ಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ವಿದ್ಯಾಕಣ್ವ ವಿರಾಜತೀರ್ಥ ಶ್ರೀಗಳು ಆಶೀರ್ವಚನ ನೀಡಿ ಮಾತನಾಡಿ ಸುರಪುರ ಸಂಸ್ಥಾನಕ್ಕೂ ಹಾಗೂ ಹುಣಸಿಹೊಳೆ ಕಣ್ವಮಠಕ್ಕೂ ಅವಿನಾಭಾವ ಸಂಬಂಧವಿದ್ದು ಮೊದಲಿನಿಂದಲೂ ಸಂಸ್ಥಾನದ ರಾಜಾಶ್ರಯ ಪಡೆದು ಸಂಸ್ಥಾನದ ಗುರುಗಳಾಗಿ ಇತಿಹಾಸ ಕಾಲದಿಂದಲೂ ನಡೆದುಕೊಂಡು ಬಂದಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗತಕ್ಕದ್ದು ಎಂದು ಹೇಳಿದರು, ಇಡೀ ದೇಶದಲ್ಲಿಯೇ ಏಕೈಕ ಪೀಠವನ್ನು ಹೊಂದಿರುವ ಹುಣಸಿಹೊಳೆ ಕಣ್ವಮಠದ ಶ್ರೇಯೋಭಿವೃದ್ಧಿಗಾಗಿ ಶ್ರೀಮಠದ ಎಲ್ಲಾ ಶಿಷ್ಯರು ಸೇವೆ ಸಲ್ಲಿಸಬೇಕು ದೇವರ ಹಾಗೂ ಪೀಠದ ಗುರುಗಳ ಅನುಗೃಹಕ್ಕೆ ಪಾತ್ರರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಪ್ರ ಸಮಾಜದ ಪ್ರಮುಖರಾದ ಗೋಪಾಲಚಾರ್ಯ ಅಗ್ನಿಹೋತ್ರಿ, ಶ್ರೀಹರಿರಾವ ಆದವಾನಿ, ರಾಘವೇಂದ್ರಾಚಾರ್ಯ ಹಳ್ಳದ, ಮಲ್ಲಾರಾವ ಕುಲಕರ್ಣಿ ಸಿಂದಗೇರಿ, ಭೀಮಶೇನಾಚಾರ್ಯ ಜೋಷಿ ಮಂಗಳೂರು, ಶ್ರೀನಿವಾಸ ದೇವರು, ವೆಂಕಪ್ಪಾಚಾರ್ಯ ಜಾಗೀರದಾರ ಶಾಂತಪುರ, ಲಕ್ಷ್ಮೀಕಾಂತ ಕುಲಕರ್ಣಿ ಅಮ್ಮಾಪುರ, ಮಲ್ಲಾರಾವ ಪಟವಾರಿ, ಚಂದ್ರಕಾಂತ ನಾಡಿಗೇರ, ವೆಂಕಟೇಶ ಜೋಷಿ ಕುರಿಹಾಳ, ಗುಂಡೇರಾವ ಕುಲಕರ್ಣಿ ಆರಳಹಳ್ಳಿ, ಶ್ರೀನಿವಾಸ ಸಿಂದಗೇರಿ, ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ, ಪ್ರಕಾಶ ಕುಲಕರ್ಣಿ, ಗಿರೀಶ ಕುಲಕರ್ಣಿ, ಶ್ರೀನಿವಾಸ ದೇವಡಿ, ವೆಂಕಟೇಶ ರಾಯನಪಾಳ್ಯ, ರಾಘವೇಂದ್ರ ಮುನಮುಟಗಿ, ಗುರುರಾಜ ಅಗ್ನಿಹೋತ್ರಿ, ವೆಂಕಟೇಶ ಕಾಮನಟಗಿ, ಮುರುಳಿಧರ ಜಾಗೀರದಾರ, ಪ್ರಾಣೇಶರಾವ ಕುಲಕರ್ಣಿ ಬೋನಾಳ ಇತರರು ಹಾಗೂ ವೇಣುಗೋಪಾಲಸ್ವಾಮಿ ಮಹಿಳಾ ಭಜನಾ ಮಂಡಳಿ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಿಂದ ಹಾಗೂ ಬೇರೆ ಕಡೆಗಳಿಂದ ಆಗಮಿಸಿದ್ದ ಹಲವರು ಮತ್ತು ಮಹಿಳೆಯರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420