ಕಲಬುರಗಿ: ನಾಡಿನ ಹಿರಿಯ ಸಾಹಿತಿಗಳಾದ ಗವೀಶ ಹಿರೇಮಠರ “ಶ್ರೀ ಕುಮಾರೇಶ್ವರ ಕೃಪಾಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳ ನಾಟ್ಯ ಸಂಘ” ಕೃತಿಗೆ 2018ರ ಸಾಲಿನ ನಾಟಕ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ 25,000 ನಗದು, ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆಯೆಂದು ಕರ್ನಾಟಕ ನಾಟಕ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಗವೀಶ ಹಿರೇಮಠ ನಾಡಿನ ಹಿರಿಯ ಸಾಹಿತಿಗಳಲ್ಲೊಬ್ಬರು. ಸುಮಾರು 50ಕ್ಕೂ ಮಿಕ್ಕಿ ಕೃತಿಗಳನ್ನು ಸಾರಸ್ವತ ಪ್ರಪಂಚಕ್ಕರ್ಪಿಸಿದ್ದಾರೆ. ನಾಡಿನ, ಹೊರ ನಾಡಿನ ಸಂಘ ಸಂಸ್ಥೆಗಳ ವಿಚಾರ ಸಂರ್ಕೀಣಗಳಲ್ಲಿ ಭಾಗವಹಿಸಿ, ವಿವಿಧ ವಿಷಯಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ.
ಕರ್ನಾಟಕ ಲಲಿತಕಲಾ ಅಕಾಡೆಮಿ, ಗುಲಬರ್ಗಾ ವಿ.ವಿ ಹಾಗೂ ಸಂಘ ಸಂಸ್ಥೆಗಳಿಂದ ಅವರ ಹಲವಾರು ಕೃತಿಗಳಿಗೆ ಪ್ರಶಸ್ತಿ ಲಭಿಸಿವೆ. ಕಳೆದ ಸಾಲಿನಲ್ಲಿ ಗುಲ್ಬರ್ಗಾ ಆಕಾಶವಾಣಿಗೆ ನಾಟಕ ಕಂಪನಿಗಳ ಬಗ್ಗೆ ರಚಿಸಿಕೊಟ್ಟ “ರಂಗದೀವಿಗೆಗಳು” ಎನ್ನುವ ಮಾಲಿಕೆ ನಾಡಿನ ಎಲ್ಲಾ ಬಾನುಲಿಗಳಿಂದ ಪ್ರಸಾರ ಹೊಂದಿದ್ದಲ್ಲದೆ ಗುಲ್ಬರ್ಗಾ ಆಕಾಶವಾಣಿಗೆ ಉತ್ತಮ ನಿರ್ಮಾಣ ಎಂದು ರಾಜ್ಯ ಮಟ್ಟದಲ್ಲಿ ಪ್ರಥಮ ಪ್ರಶಸ್ತಿ ಬಂದಿದೆ.
ಗವೀಶ ಹಿರೇಮಠರ ಬದುಕು-ಬರಹ ಎನ್ನುವ ಮಹಾಪ್ರಬಂಧ ರಚಿಸಿ ಗುಲ್ಮಾರ್ಗ ವಿ.ವಿ ಯಿಂದ ಗಿರಿಮಲ್ಲ.ಕೆ, ಅವರು ಡಾಕ್ಟರೇಟ್ ಪದವಿ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…