ಆಳಂದ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಗುರುವಾರ ಮಾಡಲಾಯಿತು.
ಕಾಲೇಜಿನ ಪ್ರಾಚಾರ್ಯರ ಕೊಠಡಿಯಲ್ಲಿ ಪ್ರಭಾರಿ ಪ್ರಾಚಾರ್ಯ ಡಾ. ದೇವಿಚಂದ ರಾಠೋಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಅಧ್ಯಕ್ಷರಾಗಿ ಪ್ರಾಚಾರ್ಯ ಡಾ. ಬಿರಾದಾರ ಕಾಶಿನಾಥ, ಸಂಯೋಜಕರಾಗಿ ಡಾ. ಶಿವಶರಣಪ್ಪ ಬಿರಾದಾರ, ಅಧ್ಯಕ್ಷರಾಗಿ ಹಣಮಂತ ಶೇರಿ, ಉಪಾಧ್ಯಕ್ಷರಾಗಿ ಶಶಿಕಾಂತ ಭಕರೆ, ಲಕ್ಷ್ಮೀಪುತ್ರ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ಕೋರೆ, ಸಹ ಕಾರ್ಯದರ್ಶಿಯಾಗಿ ಅಶ್ಪಾಕ್ ಮುಲ್ಲಾ, ಖಜಾಂಚಿಯಾಗಿ ಮೃತುಂಜಯ ಭಾಗೋಡಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೂರಜ ಪತಂಗೆ, ಸುಶೀಲ್ ಹಡಲಗಿ, ಚಂದ್ರಪ್ಪ ರೋಕಡೆ, ಶಿವಬಸಪ್ಪ ಮಲಶೆಟ್ಟಿ, ಮರೇಪ್ಪ ತಳಕೇರಿ, ನಿಶಾ ಬಾಬಶೆಟ್ಟಿ, ವಿಜಯಲಕ್ಷ್ಮೀ ಬಬಲಾದ, ಸುಧಾ, ವಿಜಯಲಕ್ಷ್ಮೀ ವಾಡೇದ, ರಾಹುಲ ಮೈಂದರ್ಗಿ, ತೌಕೀರ ಅಹ್ಮದ್, ಲಾಯಕ ಅಲಿ, ಕಾರ್ತಿಕ ರಾಠೋಡ್, ರಾಜಶೇಖರ ಘಂಟೆ, ದೊಡ್ಡಪ್ಪ ಗೌಡೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಂಘದ ನೋಂದಣಿ ಮಾಡುವ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜವಾಬ್ದಾರಿಯನ್ನು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ವಹಿಸಲಾಯಿತು. ಸಭೆಯಲ್ಲಿ ಕಾಲೇಜಿನ ಗ್ರಂಥಪಾಲಕ ಜಗನ್ನಾಥ ಹುಮನಾಬಾದೆ, ಕಲ್ಯಾಣಿ ಕಲಶೆಟ್ಟಿ, ಗುರು ಚಿಂಚೋಳಿ ಸೇರಿದಂತೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…