ಕಲಬುರಗಿ: ಹಕ್ಕಿಗಳ ಚಲನ-ವಲನದಿಂದ ವಿಮಾನಗಳ ಹಾರಾಟಕ್ಕೆ ತೊಂದರೆಯಾಗುವುದರಿಂದ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಸಾಯಿಖಾನೆ (ಪ್ರಾಣಿವಧೆ ಸ್ಥಳ) ಗಳ ತ್ಯಾಜ್ಯ ಸೇರಿದಂತೆ ಆಹಾರ ಪದಾರ್ಥಗಳ ತ್ಯಾಜ್ಯಗಳನ್ನು ಸುರಿಯುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನಯಾನ ಕಾಯ್ದೆ ೧೯೭೩ ನಿಯಮ ೯೧ ಭಾಗ ೧೧ರಲ್ಲಿ ತಿಳಿಸಿರುವಂತೆ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳ ತ್ಯಾಜ್ಯ ಸೇರಿದಂತೆ ಯಾವುದೇ ರೀತಿಯ ತ್ಯಾಜ್ಯ ಸುರಿಯುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂಬಂಧ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಭೆ ನಡೆಸಿ, ಗ್ರಾಮ ಪಂಚಾಯ್ತಿ ಹಾಗೂ ಆರೋಗ್ಯ ಇಲಾಖೆಗಳಿಗೆ ಈ ಕುರಿತು ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ತ್ಯಾಜ್ಯ ಸುರಿಯುವಂತಹ ಅಂಗಡಿ ಮಾಲೀಕರಿಗೆ ನೋಟೀಸು ಕೊಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಹಾಗೆಯೇ ರೈತರು ಕೂಡ ತಮ್ಮ ಹೊಲಗಳಲ್ಲಿ ತೊಗರಿ ಕಡ್ಡಿಗಳನ್ನು ವಿಮಾನನಿಲ್ದಾಣದ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸುಡುವುದನ್ನು ನಿಲ್ಲಿಸಬೇಕು. ಸುಡುವುದರಿಂದ ಹೊಗೆ ದಟ್ಟೈಸಿ, ವಿಮಾನ ಸಂಚಾರಕ್ಕೆ ತೊಂದರೆಮಾಗಲಿದೆ ಎಂದು ಅವರು ಹೇಳಿದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…