ಬಿಸಿ ಬಿಸಿ ಸುದ್ದಿ

ಸಂಭ್ರಮದಿಂದ ಜರುಗಿದ ಮಹಾಮಹಿಮ ಶರಣ ಬಸವೇಶ್ವರ ರಥೋತ್ಸವ

ಕಲಬುರಗಿ: ಸಂಪ್ರದಾಯದಂತೆ ಕಲಬುರಗಿ ಮಹಾದಾಸೋಹಿ ಶರಣಬಸವೇಶ್ವರ ಯಾತ್ರಾ ಮಹೋತ್ಸವ ಅತ್ಯಂತ ಸರಳ ಹಾಗೂ ಸಂಭ್ರಮದಿಂದ ಜರುಗಿತು.

ಕರೋನಾ ವೈರಸ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾತ್ರೆಯನ್ನು ರದ್ದು ಮಾಡಿತ್ತು. ಆದರೂ ಭಕ್ತಾದಿಗಳು ಸಂಪ್ರದಾಯದ ಪ್ರಕಾರ ಇಂದು ಮಧ್ಯಾಹ್ನ 4 ಗಂಟೆಗೆ ರಥೋತ್ಸವ ನಡೆಸಿ ತಮ್ಮ ಬಕ್ತಿ ಪರಾಕಾಷ್ಠೆಯನ್ನು ಮೆರೆದರು.

ತಿಂಗಳ ಪರ್ಯಂತ ನಡೆಯುವ ಈ ಜಾತ್ರೆಗೆಂದು ದೇವಸ್ಥಾನದ ಮುಂಭಾಗದಲ್ಲಿ ವಿವಿಧ ಬಗೆಯ ಆಟಿಗೆಯ ವಸ್ತುಗಳು, ತಿಂಡಿ, ತನಿಸು ತಯಾರಿಸುವ ಅಂಗಡಿಗಳು ಈ ಮುಂಚೆಯೇ ತಲೆಯೆತ್ತಿ ನಿಂತಿದ್ದು, ಅವರಿಗೂ ಸಹ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.

ಸಂಜೆ 6 ಗಂಟೆಗೆ ನಡೆಯಬೇಕಾಗಿದ್ದ ರಥೋತ್ಸವ ಕಾರ್ಯಕ್ರಮ ಇಂದು ಎರಡು ಗಂಟೆ ಮುಂಚಿತವಾಗಿಯೇ ರಥೋತ್ಸವ ಕಾರ್ಯಕ್ರಮವನ್ನು ಔಪಚಾರಿಕವೆಂಬಂತೆ ಮುಗಿಸಲಾಯಿತು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಜಾತ್ರೆಗಾಗಿ ಬರುವ ಭಕ್ತಾದಿಗಳನ್ನು ತಡೆದು ತಿಳಿವಳಿಕೆ ನೀಡುವ ಕಾರ್ಯ ನಡೆಸಿದ್ದರು. ದೇವಸ್ಥಾನದ ಆವರಣದಲ್ಲಿ ಗುಂಪು ಗುಂಪಾಗಿ ಸೇರದಂತೆ ಬಕ್ತಾದಿಗಳ ಮನವೊಲಿಸಿದ್ದರು.

ಆದರೂ ವಿವಿಧ ಪ್ರದೇಶಗಳಿಂದ ಹಾಗೂ ನಗರದ ಜನತೆ ದೇವಸ್ಥಾನಕ್ಕೆ ಬೆಳಗ್ಗೆಯಿಂದಲೇ ಧಾವಿಸುತ್ತಿದ್ದರು. ಅಂತೂ ಕೊನೆಗೆ ಶರಣಬಸವೇಶ್ವರ ರಥೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕರನಾ ವೈರಸ್ ನಿಂದಾಗಿ ಯಾತ್ರಾ ಮಹೋತ್ಸವಕ್ಕೂ ಮಂಕು ಕವಿದದ್ದು ಸುಳ್ಳಲ್ಲ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

9 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

11 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

11 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

12 hours ago