ಭಕ್ತರ ಉದ್ಘೋಷದಲ್ಲಿ ರಥೋತ್ಸವಕ್ಕೆ ಚಾಲನೆ

ಕಲಬುರಗಿ: ನಾಡಿನ ಜನರ ಆರಾದ್ಯ ದೇವರಾದ ಶ್ರೀ ಶರಣಬಸವೇಶ್ವರ ೧೯೮ನೇ ಜಾತ್ರೆ ಅಂಗವಾಗಿ ಕೇವಲ ಪೋಲೀಸ ಸಿಬ್ಬಂದಿ ಹಾಗೂ ಶರಣಬಸವೇಶ್ವರ ಸಿಬ್ಬಂದಿ ಹಾಗೂ ಕುಟುಂಬ ವರ್ಗದವರಿಂದ ಶುಕ್ರವಾರ ಸಂಜೆ ೪ ಗಂಟೆಗೆ ಶ್ರೀ ಶರಣಬಸವೇಶ್ವರ ರಥೋತ್ಸವ ಜರುಗಿತ್ತು.

ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿಯಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಹಾಗೂ ಅವರು ಶ್ರೀ ಶರಣಬಸವೇಶ್ವರರ ಮಹಿಮೆಯಿಂದ ಕೂಡಿದ ಪರುಷ ಬಟ್ಟಲು, (ಬೆಳ್ಳಿಯ ಬಟ್ಟಲು)ನ್ನು ದಾಸೋಹ ಮಹಾಮನೆಯಲ್ಲಿ ಪ್ರದರ್ಶಿಸಿದರು. ಚಿ.ದೊಡ್ಡಪ್ಪ ಅಪ್ಪಾ ಹಾಗೂ ಮಾತೋಶ್ರೀ ದಾಕ್ಷಾಯಿಣಿ ಅವ್ವನವರು ಪರುಷ ಬಟ್ಟಲು, (ಬೆಳ್ಳಿಯ ಬಟ್ಟಲು)ನ್ನು ಸಾರ್ವಜನಿಕರಿಗೆ ಪ್ರದರ್ಶಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಸರ್ಕಾರ ಆದೇಶಕ್ಕೆ ಸಹಕರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ರಥೋತ್ಸವದಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಯಿತು. ಯಾತ್ರಾ ದಿನದಿಂದ ಯುಗಾದಿ ಹಬ್ಬದವರೆಗೆ ಲಕ್ಷಾಂತರ ಜನ ದೇವರ ದರ್ಶನಕ್ಕಾಗಿ ಆಗಮಿಸುತ್ತಾರೆ. ದೇವರ ದರ್ಶನ ಪಡೆದುಕೊಂಡು ಪ್ರಸಾದ ಸೇವೆನೆ ಮಾಡಿ ತಮ್ಮ ತಮ್ಮ ಸ್ಥಳಗಳಿಗೆ ಹಿಂದುರಗಬೇಕೆಂದು ಡಾ. ಶರಣಬಸವಪ್ಪ ಅಪ್ಪಾ ಶುಕ್ರವಾರ ತಿಳಿಸಿದರು.

ಜನರು ಮಾಂಸಹಾರ ಸೇವನೆ ಕಡಿಮೆಗೊಳಿಸಬೇಕು. ಆಹಾರ ಉತ್ಪನ್ನಗಳಾದ ಉಳಾಗಡ್ಡಿ, ಬೆಳ್ಳುಳ್ಳಿಗಳಿಂದ ಎಷೆಲ್ಲ ರೋಗಗಳನ್ನು ಗುಣಪಡಿಸಬಹುದು. ಪ್ರತಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಡಾ. ಅಪ್ಪಾ ಹೇಳಿದರು. ರಥೋತ್ಸವದ ಸಕಲ ಸಂಪ್ರದಾಯವನ್ನು ಕಡೆಗಣಿಸದಂತೆ ನೊಡಿಕೊಳ್ಳಲಾಯಿತು. ಡೊಳ್ಳು, ಭಜನೆ, ಸುಮಂಗಳೆಯರ ಕೈಯಲ್ಲಿ ಆರತಿ ನಂದಿಕೋಲುಗಳ ಮೆರವಣಿಗೆ ಇತ್ಯಾದಿ ಸಂಪ್ರದಾಯವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ ಶರತ್ ಅಂಗನವಾಡಿ ಸೇರುದಂತೆ ಎಲ್ಲಾ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ, ಮಾಲ್, ಚಲನಚಿತ್ರ ಮಂದಿರಗಳಿಗೆ ಒಂದುವಾರ ಕಾಲ ರಜೆ ಘೋಷಿಸಿದ್ದರು.

ಈ ಸಂದರ್ಭದಲ್ಲಿ ಮಾತೋಶ್ರೀ ದಾಕ್ಷಾಯಿಣಿ ಅಪ್ಪಾ, ಶರಣಬಸವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ, ವಿವಿ. ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಡಾ. ಲಕ್ಷ್ಮಿ ಮಾಕಾ ಡಾ. ಸುರೇಶ ನಂದಗಾಂವ ಪೋಲಿಸ್ ಸಿಬ್ಬಂದಿ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

5 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

8 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

13 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

18 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

23 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420