ಕಲಬುರಗಿ: ಕಲಬುರಗಿ ನಗರದ ೭೬ ವ?ದ ವಯೋವೃದ್ಧ ಕೋರೋನಾ ವೈರಸ್ನಿಂದ ನಿಧನವಾಗಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸಿಸುವ ವಾರ್ಡ್ ನಂಬರ್ ೩೦ರ (ಕೆ.ಎನ್.ಜೆಡ್ ಫಂಕ್ಷನ್ ಹಾಲ್ ಬಳಿ) ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪಾಲಿಕೆ ಮತ್ತು ಆರೋಗ್ಯಾಧಿಕರಿಗಳಿಗೆ ಸೊಂಕು ಹರಡುವಿಕೆಗೆ ತಡೆಗಟ್ಟಬಹುದಾದ ಎಲ್ಲಾ ಮುನ್ನೇಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ನಿಧನ ಹೊಂದಿದ ವ್ಯಕ್ತಿಯ ಮನೆಯಿರುವ ವಾರ್ಡ್ನ್ನು ಅಡಳಿತ ಬ್ಲಾಕ್/ ಕಂಟೇನ್ಮೆಂಟ್ ಝೋನ್ ಎಂದು ಪರಿಗಣಿಸಿ ಇಲ್ಲಿಂದ ಬೇರೆ ಪ್ರದೇಶಕ್ಕೆ ಸೊಂಕು ಹರಡದಂತೆ ಮುಂಜಾಗ್ರತವಾಗಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಐ.ಇ.ಸಿ ಚಟುವಟಿಕೆಗಳು ತ್ವರಿತಗತಿಯಲ್ಲಿ ನಡೆಸಬೇಕು. ಇನ್ನು ಕಂಟೇನ್ಮೆಂಟ್ ಝೋನ್ ಸುತ್ತಮುತ್ತ ೫ ಕಿ.ಮೀ ಪ್ರದೇಶ ಬಫರ್ ಝೋನ್ ಎಂದು ಗುರುತಿಸಿ ಸೊಂಕಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ನಿರಂತರ ನಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪಂಚಾಯತಿ ಸಿ.ಇ.ಓ. ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…