ಸುರಪುರ: ತಾಲ್ಲೂಕಿನ ಅರಕೇರಾ ಜೆ. ಗ್ರಾಮದಲ್ಲಿರುವ ಗುರಯ್ಯಸ್ವಾಮಿ ಲೋಯೇರ್ ಅನಾಥಾಶ್ರಮಕ್ಕೆ ಚಿತ್ರನಟ ದರ್ಶನ್ ತನ್ನ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಕಳುಹಿಸಿ ಕೊಟ್ಟಿದ್ದ ಅಕ್ಕಿ ಬೇಳೆ ಮತ್ತಿತರೆ ದಿನಸಿಗಳನ್ನು ಅಭಿಮಾನಿಗಳು ವಿತರಿಸಿದರು.
ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಕಬಾಡಗೇರಾ ಮಾತನಾಡಿ, ದರ್ಶನ್ ಅವರು ತಮ್ಮ ಸಂಪಾದನೆಯ ಅರ್ಧದಷ್ಟು ಹಣವನ್ನು ಬಡ ಬಗ್ಗರಿಗೆ, ಅನಾಥಾಶ್ರಮಕ್ಕೆ ದೇಣಿಗೆ ನೀಡುತ್ತಾರೆ ಅಲ್ಲದೆ ತಮ್ಮ ಜನ್ಮ ದಿನಕ್ಕೆ ಅಭಿಮಾನಿಗಳು ನೀಡಿದ ಅಕ್ಕಿ, ಬೇಳೆ ಇತರ ದಿನಸಿಗಳನ್ನು ರಾಜ್ಯದ ಅನಾಥಾಶ್ರಮಗಳಿಗೆ ಕಳಿಸಿಕೊಟ್ಟಿದ್ದಾರೆ.
ಅದರಂತೆ ದರ್ಶನ್ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಲು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ದರ್ಶನ್ ಹೆಸರಿನಲ್ಲಿ ರಕ್ತದಾನ ಶಿಬಿರ, ಉದ್ಯೋಗ ಮೇಳ, ಆರೋಗ್ಯ ಮೇಳ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಶರಣಪ್ಪ ಡಿಬಾಸ್, ಉಪಾಧ್ಯಕ್ಷ ಮೌನೇಶ ಕಟ್ಟಿಮನಿ, ರಾಘವೇಂದ್ರ ಗೋಗಿಕರ್, ರಾಜು ಹುಣಸಗಿ, ಮಲ್ಲು ಹುಣಸಗಿ, ಮಂಜು ಸುರಪುರ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…