ರೈತರ ಸಾಲಮನ್ನಾ ಯೋಜನೆ: 7 ದಿನದೊಳಗೆ ದಾಖಲಾತಿ ಸಲ್ಲಿಕೆಗೆ ಸೂಚನೆ

ಕಲಬುರಗಿ: ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ಸಹಕಾರ ಬ್ಯಾಂಕುಗಳಿಂದ ಅಲ್ಪಾವಧಿ ಬೆಳೆ ಸಾಲ ಪಡೆದು ೧೦.೦೭.೨೦೧೮ ಕ್ಕೆ ಹೊಂದಿರುವ ಹೊರಬಾಕಿಯಲ್ಲಿ ಗರಿಷ್ಠ ರೂ. ೧ ಲಕ್ಷದವರೆಗಿನ ಸಾಲ ಸೌಲಭ್ಯ ಪಡೆಯಬೇಕಾದ್ದಲ್ಲಿ ಏಳು ದಿನದೊಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕೆಂದು ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗೋಪಾಲ ಚೌವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ೨೦೧೮ರ ಈ ಸಾಲಮನ್ನಾ ಯೋಜನೆಯನ್ನು ನಮೂನೆ ೫೨ರ ಹೊಸ ತಂತ್ರಾಂಶದಲ್ಲಿ ಸಂಘವಾರು ಮಾಹಿತಿಯನ್ನು ಅಳವಡಿಸಿ, ಅರ್ಹ ಫಲಾನುಭವಿಗಳಿಗೆ ಹಂತ ಹಂತವಾಗಿ ಸಾಲಮನ್ನಾ ಯೋಜನೆ ಜಾರಿಗೊಳಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬರುವ ಕೆಲವು ರೈತ ಸಾಲ ಬಾಕಿದಾರರು ಸಾಲಮನ್ನಾ ಯೋಜನೆ ಕುರಿತು ಹೊರಡಿಸಿರುವ ಸರ್ಕಾರಿ ಸುತ್ತೋಲೆಯ ಪ್ರಕಾರ ಪ್ರತಿ ರೈತರ ಆಧಾರ ಕಾರ್ಡ್, ರೇಷನ್ ಕಾರ್ಡ್, ಜಮೀನು ಹಾಗೂ ಸ್ವಯಂ ಧೃಢೀಕರಣ ಪತ್ರ ಪಡೆದು ತಂತ್ರಾಂಶದಲ್ಲಿ ಅಳವಡಿಸಬೇಕಾಗಿದೆ. ಸಾಲ ಬಾಕಿ ಇರುವ ರೈತರು ಮೇಲೆ ತಿಳಿಸಿರುವ ದಾಖಲಾತಿಗಳನ್ನು ಏಳು ದಿವಸದೊಳಗಾಗಿ ಸಂಘಕ್ಕೆ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಸಾಲಮನ್ನಾ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಸಂಘದ ಕಾರ್ಯಕ್ಷೇತ್ರದಲ್ಲಿ ಇರುವ ಸಾಲಗಾರರನ್ನು ಖುದ್ದು ಸಂಪರ್ಕಿಸಿ, ಸಾಲಮನ್ನಾ ಯೋಜನೆ-೨೦೧೮ ಅನುಷ್ಠಾನ ಅಂತಿಮಗೊಳಿಸಲು ಬೇಕಾದ ದಾಖಲಾತಿಗಳನ್ನು ಪಡೆದು ತಂತ್ರಾಂಶದಲ್ಲಿ ಅಳವಡಿಸಿ, ಅರ್ಹ ರೈತರನ್ನು ಗುರುತಿಸುವಂತೆ ಮಾನ್ಯ ನಿಬಂಧಕರು ಸಹಕಾರ ಸಂಘಗಳು, ಬೆಂಗಳೂರು ಇವರ ಸುತ್ತೋಲೆ ಸಂಖ್ಯೆ ಸಿಆರಡಿ/ಸಿಎಬಿ-೧/೩೩/೨೦೧೮-೧೯, ೧೨-೦೩-೨೦೨೦ ರಲ್ಲಿ ೧೦ ಅಂಶಗಳಿಗೆ ಸಂಬಂಧಿಸಿದಂತೆ, ಅರ್ಹ ರೈತರನ್ನು ಗುರುತಿಸುವ ಸಲುವಾಗಿ ನಿರ್ದೇಶನ ನೀಡಿರುತ್ತಾರೆ. ಹಾಗಾಗಿ ಮಾಹಿತಿ ಪೂರೈಸದೇ ಇದ್ದಲ್ಲಿ ಅಂತಹ ರೈತರು ವೈಯುಕ್ತಿಕ ಜವಾಬ್ದಾರಿಗೆ ಒಳಪಟ್ಟು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಾಲಮನ್ನಾ ಸೌಲಭ್ಯ ತಿರಸ್ಕರಿಸಿ, ತಂತ್ರಾಂಶದಲ್ಲಿ ಸಾಲಮನ್ನಾ-೨೦೧೮ ಅನುಷ್ಠ್ಟಾನ ಅಂತಿಮ ಗೊಳಿಸುತ್ತಾರೆ ಎಂದು ತಿಳಿಸಿದ್ದಾರೆ.
****

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420