ಕರೋನಾ ರೋಗದ ಬಗ್ಗೆ ಭಯಬೇಡ, ಮುಂಜಾಗೃತೆ ವಹಿಸಿ: ಸುರೇಶ ಮೇಕಿನ್

ಶಹಾಬಾದ: ಕರೋನಾ ರೋಗದ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅವಶ್ಯಕತೆಯಿಲ್ಲ. ಮುಂಜಾಗೃತ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಿವುದರ ಜತೆಗೆ ಜನಬೀಡಾದ ಪ್ರದೇಶಗಳಲ್ಲಿ ಆದಷ್ಟು ಭಾಗವಹಿಸುವುದು ಕಡಿಮೆ ಮಾಡಿದರೇ ರೋಗ ಬಾರದಂತೆ ತಡೆಗಟ್ಟಬಹುದು ಎಂದು ತಾಲೂಕಾ ಆರೋಗ್ಯ ಅಧಿಕಾರಿ ಸುರೇಶ ಮೇಕಿನ್ ಹೇಳಿದರು.

ಅವರು ಶುಕ್ರವಾರ ನಗರಸಭೆಯ ಸಭಾಂಗಣದಲ್ಲಿ ತಾಲೂಕಾ ಆರೋಗ್ಯ ಇಲಾಖೆ ಮತ್ತು ನಗರಸಭೆ ವತಿಯಿಂದ ಆಯೋಜಿಸಲಾದ ಕರೋನಾ ಸೋಂಕಿನ ಬಗ್ಗೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅನೇಕ ರಾಷ್ಟ್ರಗಲ್ಲಿ ಕರೋನಾ ಎಂಬ ಮಹಾಮಾರಿ ರೋಗ ಹರಡಿ ಜನರು ಇದರಿಂದ ಬಳಲುತ್ತಿದ್ದು, ಇಂತಹ ರೋಗದಿಂದ ಸಾವಿಗೀಡಾಗಿರುವವರ ಸಂಖ್ಯೆ ದಿನದಿಂದ ದಿನ ಏರುತ್ತಿದ್ದು ಈ ರೋಗವನ್ನು ತಡೆಯಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಅವಶ್ಯಕ.ಅಲ್ಲದೇ ತಣ್ಣನೇಯ ಪದಾರ್ಥಗಳನ್ನು ಬಳಸದೇ ಬಿಸಿಯಾದ ಆಹಾರ ಪದಾರ್ಥಗಳನ್ನು ಸೇವಿಸತಕ್ಕದ್ದು.ಯಾರಿಗಾದರೂ ನೆಗಡಿ, ಗಂಟಲು ನೋವು, ಉಸಿರಾಟದ ತೊಂದರೆ ಹಾಗೂ ಸೀನುಗಳು ಬರುವ ಲಕ್ಷಣಗಳು ಕಂಡು ಬಂದರೆ ಆದಷ್ಟು ಬೇಗನೆ ಸ್ಥಳೀಯ ಆಸ್ಪತ್ರೆಗೆ ಬೇಟಿ ನೀಡಿ, ಚಿಕಿತ್ಸೆಗೆ ಒಳಗಾಗತಕ್ಕದ್ದು. ಇದು ಒಬ್ಬರಿಂದ ಒಬ್ಬರಿಗೆ ಬಹು ಬೇಗ ಹರಡುವುದರಿಂದ ಇದನ್ನು ನಿಯಂತ್ರಣ ಮಾಡಲು ಮಾಸ್ಕ್ ಧರಿಸುವುದು, ಕೈಗಳನ್ನು ಶುಚಿತ್ವವಾಗಿ ತೊಳೆದುಕೊಳ್ಳುವುದು.ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮ ಎಂದು ಹೇಳಿದರು.

ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ನಗರಸಭೆಯಿಂದ ಆಟೋಗಳ ಧವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವಾರ್ಡ ಮತ್ತು ಮುಖ್ಯ ಬೀದಿಗಲ್ಲಿ ಪೋಸ್ಟರ್‌ಗಳನ್ನು ಹಾಕಲಾಗಿದೆ.ಈಗಾಗಲೇ ನಗರಸಭೆಯ ಪೌರಾಕಾರ್ಮಿಕರಿಗೆ ಕೈಗಳಿಗೆ,ಕಾಲುಗಳಿಗೆ ಧರಿಸಲು ರಕ್ಷಾ ಕವಚಗಳು ನೀಡುವುದರ ಜತೆಗೆ ಮಾಸ್ಕ್‌ಗಳನ್ನು ನೀಡಲಾಗಿದೆ.ಇವುಗಳನ್ನು ಧರಿಯೇ ನಿಮ್ಮ ಕೆಲಸದಲ್ಲಿ ತೊಡಗಿ, ಇದರಿಂದ ರೋಗ ಬರದಂತೆ ತಡೆಯುವ ಸಾಧ್ಯತೆಯಿದೆ ಎಂದು ತಿಳುವಳಿಕೆ ಮೂಡಿಸಲಾಗಿದೆ. – ಶಿವರಾಜಕುಮಾರ ನೈರ್ಮಲ್ಯ ನಿರೀಕ್ಷಕ ನಗರಸಭೆ ಶಹಾಬಾದ.

ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಈಗಾಗಲೇ ದೇಶದಲ್ಲಿಯೇ ಕರೋನಾ ರೋಗಕ್ಕೆ ಕಲಬುರಗಿ ಜಿಲ್ಲೆಯ ಒಬ್ಬ ವೃದ್ಧ ಬಲಲಿಯಾಗಿದ್ದಾರೆ.ಆದ್ದರಿಂದ ಮುಂಜಾಗೃತ ಕ್ರಮವಾಗಿ ರೋಗ ಹರಡದಂತೆ ಜಿಲ್ಲಾಡಳಿತ ಮದುವೆ ಸಮಾರಂಭ,ಸಾರ್ವಜನಿಕ ಕಾರ್ಯಕ್ರಮಗಳು, ಚಲನಚಿತ್ರ ಮಂದಿರ,ಮಾಹೋಲಗಳು ಸೇರಿದಂತೆ ಜನಬೀಡು ಉಂಟಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.ಅಲ್ಲದೇ ನಗರಸಭೆಯ ಸದಸ್ಯರು ಮತ್ತು ಸಾರ್ವಜನಿಕರು ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಸುತ್ತಮುತ್ತಲಿನ ಜನರಿಗೆ ತಿಳುವಳಿಕೆ ಮೂಡಿಸಿದರೇ ಈ ರೋಗದಂತೆ ಬಚಾವ್ ಆಗಲು ಸಾಧ್ಯವಾಗುತ್ತದೆ.ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ನಗರಸಭೆಯ ಎಇಇ ಪುರುಷೋತ್ತಮ, ಪಿಐ ಅಮರೇಶ.ಬಿ, ವೈದ್ಯಾಧಿಕಾರಿ ಡಾ.ಸಜ್ಜನ್, ನಗರಸಭೆಯ ಸದಸ್ಯರಾದ ರವಿ ರಾಠೋಡ, ಡಾ.ಅಹ್ಮದ್, ಪರ್ವಾತಿ ಪವಾರ, ಸಾಬೇರಾ ಬೇಗಂ, ಶರಣು ಪಗಲಾಪೂರ, ಕಿರಿಯ ಆರೋಗ್ಯ ನಿರೀಕ್ಷಕರಾದ ಶರಣು, ರಾಜೇಶ, ಎಡಿಬಿ ಎಇಇ ರೇವಣಸಿದ್ದಪ್ಪ ಕುಂಬಾರ, ನಗರಸಭೆಯ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420