ಮಲ್ಲಾಬಾದ್ ಏತನೀರಾವರಿಗೆ ಆಗ್ರಹಿಸಿ ಮಾ.23ಕ್ಕೆ ಬ್ರಹತ್ ಪ್ರತಿಭಟನೆ

ಯಡ್ರಾಮಿ: ನೀರಾವರಿಯಿಂದ ವಂಚಿತವಾಗಿರುವ ಯಡ್ರಾಮಿ ತಾಲ್ಲೂಕಿನ ಮಲ್ಲಾಬಾದ್ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಇಜೇರಿಯಲ್ಲಿ ರೈತ ಮುಖಂಡರು ಮತ್ತು ವಿವಿಧ ಹಳ್ಳಿಗಳ ಪ್ರಮುಖರು ಸಭೆ ಸೇರಿ ಚರ್ಚಿಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡರು ಮಲ್ಲಾಬಾದ್ ಏತ ನೀರಾವರಿ ನಮ್ಮ ಭಾಗದ ಪ್ರಮುಖ ನಿರಾವರಿ ಯೋಜನೆಯಾಗಿದೆ. ಯಾವುದೇ ಸರಕಾರ ಬಂದರೂ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ತಿಸುತ್ತಿಲ್ಲ ಎಂದು ಆರೋಪಿಸಿದರು. ಈ ಯೋಜನೆಗೆ ಸರಕಾರ ಸುಮಾರು 600ಕೋಟಿ ಅಂದಾಜು ಪಟ್ಟಿ ತಯಾರಿಸಿದೆ. ಆದರೆ ಈವರೆಗೆ ಬಿಡುಗಡೆಯಾಗಿದ್ದು ಕೇವಲ 167 ಕೋಟಿ ಮಾತ್ರ ಎಂದು ಅಸಮಧಾನ ವ್ಶಕ್ತಪಡಿಸಿದರು.

ಈ ನಿರಾವರಿ ಯೋಜನೆಯ ಬಗ್ಗೆ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಏಕೆ? ಎಂದು ಪ್ರಶ್ನಿಸಿದ ಮುಖಂಡರುˌ ಶಾಸಕ ಡಾ ಅಜಯ್ ಸಿಂಗ್ ರವರು ಪ್ರಸ್ತುತ ಅಧಿವೇಶನದಲ್ಲಿ ನಿರಾವರಿ ಮಂತ್ರಿಗಳಿಗೆ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿ ಸುಪ್ರೀಂ ಕೋರ್ಟ್ ನ ತಾಂತ್ರಿಕ ಕಾರಣಗಳನ್ನು ನೀಡಿದ್ದಾರೆ. ಇದು ಸರಿಯಲ್ಲ. ಗುತ್ತಿ ಬಸವಣ್ಣ ಮತ್ತು ವಿಜಯಪುರ ಜಿಲ್ಲೆಗೆ ಸುಪ್ರೀಂ ಕೋರ್ಟ್ ತೀರ್ಪು ಅನ್ವಯಿಸುವದಿಲ್ಲವೇ? ಎಂದು ಪ್ರಶ್ನಿಸಿದರು.

ಮಲ್ಲಾಬಾದ್ ಏತ ನೀರಾವರಿ ಯೋಜನೆ ಜಾರಿಗಾಗಿ ಮತ್ತು ತಕ್ಷಣ ಯೋಜನೆಯ ಅಂದಾಜು ವೆಚ್ಚದ 600 ಕೋಟಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 21 ಮತ್ತು 22 ರಂದು ಈ ಯೋಜನೆಗೆ ಒಳಪಡುವ ಹಳ್ಳಿಗಳಲ್ಲಿ ಜನಜಾಗೃತಿ ಸಭೆಗಳನ್ನು ನಡೆಸುವುದು. ಮತ್ತು ಮಾರ್ಚ್ 23 ರಂದು ಯಡ್ರಾಮಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಮುಖಂಡರಾದ ಲಾಲಯ್ಯಾ ಗುತ್ತೆದಾರˌ ರುಕುಮ್ ಪಟೇಲ ಪೋಲಿಸ್ ಪಾಟೀಲˌ ಶೌಕತ್ ಅಲಿ ಆಲೂರುˌ ಸಂಗನ ಗೌಡ ಗುಗಿಹಾಳˌ ಕಲ್ಲಯ್ಯಾ ಸ್ವಾಮಿˌ ಚಂದ್ರಕಾಂತ ಯಂಕಂಚಿˌ ಬಸವರಾಜ ಅಣಜಗಿˌ ಮಲ್ಕಪ್ಪ ಸಿಡ್ಲಿˌ ಮಂಜುನಾಥ ರೆಡ್ಡಿˌ ದೇವಿಂದ್ರಪ್ಪ ಮುತ್ತಕೋಡˌ ವೆಂಕಟೇಶ ದೊರೆˌ ಗೌಡಪ್ಪಗೌಡ ಮಲ್ಲಾಬಾದ್ˌ ಗೌಡಪ್ಪಗೌಡ ಪಾಟೀಲ ಗುಗಿಹಾಳˌ ಅಯ್ಯಣ್ಣಗೌಡ ಬಿರಾದಾರˌ ಭೀಮನಗೌಡ ಜಮಖಂಡಿˌ ಬೀಮಣ್ಣ ದೊರೆˌ ಬಾಪುಗೌಡ ಮಾಲಿ ಪಾಟೀಲˌ ಶಿವಪ್ಪ ಡೀಲರ್ ಜವಳಗಿˌ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420