ಮೌಲ್ಯಯುತ ಕೃತಿಗಳು ಬದುಕಿಗೆ ಸ್ಪೂರ್ತಿ : ಡಾ. ಎಸ್. ಆರ್. ಶಿಣ್ಣೂರು

ಶಹಾಪುರ: ಅತಿ ವೇಗದ ಬದುಕಿನ ಜಂಜಾಟದಲ್ಲಿ ಎಲ್ಲವನ್ನೂ ಮರೆತು ಕೊಂಚ ಕ್ರಿಯಾತ್ಮಕ ಹಾಗೂ ಸೃಜನಾತ್ಮದ ಸಾಹಿತ್ಯದೆಡೆಗೆ ಹೆಚ್ಚೆಚ್ಚು ಒಲವು ತೋರಿದಾಗ ಮಾತ್ರ ಮೌಲ್ಯಯುತ ಕೃತಿಗಳು ನೆಮ್ಮದಿಯ ಬದುಕಿಗೆ ಸ್ಪೂರ್ತಿಯಾಗಬಲ್ಲವು ಎಂದು ಖ್ಯಾತ ವೈದ್ಯರಾದ ಡಾ.ಎಸ್.ಆರ್.ಶಿಣ್ಣೂರು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ ದೊಡ್ಡಬಸಪ್ಪ ಬಳೂರಗಿ ಅವರು ರಚಿಸಿದ ಜೀವನ ನೀತಿ ಹಾಗೂ ವಚನಸುಮ ಎಂಬ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೊತೆಗೆ ಮಹಾಮಾರಿ ಕರೋನಾ ವೈರಸ್ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಿ ಎಂದು ಹಲವಾರು ಸಲಹೆ, ಸೂಚನೆಗಳು ನೀಡಿದರು.

ಜೀವನ ನೀತಿ, ಕೃತಿ ಬಿಡುಗಡೆ ಮಾಡಿ ಮಾತನಾಡಿದ ಡಾ. ಅಬ್ದುಲ್ ಕರೀಂ ಕನ್ಯಾಕೋಳೂರ ಅವರು ದೊಡ್ಡಬಸಪ್ಪ ಬಳೂರಗಿ ಅವರು ಸುಸಂಸ್ಕೃತ ಹಾಗೂ ಸೌಮ್ಯ ಸ್ವಭಾವದ ಸರಳ ಸಜ್ಜನಿಕಯ ವ್ಯಕ್ತಿ ಅಲ್ಲದೆ ಅವರ ಜೀವನ ಶೈಲಿಯೂ ಕೂಡ ಬಹಳ ಸರಳ ಮತ್ತು ಶಿಸ್ತಿನಿಂದ ಕೂಡಿದೆ ಎಂದು ಹೇಳಿದರು. ಜೊತೆಗೆ ಹಲವಾರು ಸೃಜನಾತ್ಮಕ ಹಾಗೂ ಅಧ್ಯಾತ್ಮಿಕ ಸಾಹಿತ್ಯವನ್ನು ಮೈಗೂಡಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಕೃತಿಗಳು ನೀಡುವುದರ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ ಕಟ್ಟುವುದರಲ್ಲಿ ಇವರ ಶ್ರಮ ಅಪಾರವಿದೆ ಎಂದು ಬಣ್ಣಿಸಿದರು.

ವಚನ ಸುಮಾ ಕೃತಿಯ ಕುರಿತು ಚಿಂತಕರಾದ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ ವಚನ ಸಾಹಿತ್ಯ ಕೇವಲ ಇತಿಮಿತಿಗೆ ಸೀಮಿತವಾಗಿರುವುದಿಲ್ಲ. ಇಡೀ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಗಳ ಒಳತಿಗಾಗಿ ಇರುವುದನ್ನು ನಾವು ಎಂದಿಗೂ ಮರೆಯಬಾರದು. ದ್ವಂದ್ವ ನೀತಿಯನ್ನು ಖಂಡಿಸಿ ಪ್ರಾಮಾಣಿಕತೆ ಹಾಗೂ ಶಿಸ್ತು ಬದ್ಧತೆಗೆ ಜಾಸ್ತಿ ಒತ್ತು ನೀಡಿದವರು ಬಸವಾದಿ ಶರಣರು. ಆದ್ದರಿಂದ ವಚನ ಸಾಹಿತ್ಯವನ್ನು ಎಲ್ಲರೂ ಓದಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಗುರುಪಾದೇಶ್ವರ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸಿದ್ದಲಿಂಗಣ್ಣ ಆನೆಗುಂದಿ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಉದ್ಯಮಿಗಳಾದ ಬಸವರಾಜ ಹಿರೇಮಠ, ಸಾಹಿತಿ ಹಾಗೂ ಸಂಶೋಧಕರಾದ ಡಾ.ಮೋನಪ್ಪ ಶಿರವಾಳ, ಡಾ.ರಮೇಶ ಹಿರೇಮಠ ಭಾಗವಹಿಸಿದ್ದರು.

ಕೃತಿಯ ಲೇಖಕ ಹಾಗೂ ಹಿರಿಯ ಸಾಹಿತಿ ದೊಡ್ಡಬಸಪ್ಪ ಬಳೂರಗಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿಣ್ಣೂರು ನಿರೂಪಿಸಿದರು. ಪಂಚಾಕ್ಷರಿ ಹಿರೇಮಠ ಸ್ವಾಗತಿಸಿದರು. ಕವಯತ್ರಿ ಶಕುಂತಲಾ ಹಡಗಲಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420