ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಶಂಕಿತ ಕೊರೊನಾ ವೈರಸ್ ಕಂಡುಬಂದ ಹಿನ್ನೆಲೆ, ಅವರ ಗಂಟಲು ದ್ರವವನ್ನು ಲ್ಯಾಬ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದರು.
ಕೊರೊನಾದಿಂದ ಮೃತಪಟ್ಟ ವೃದ್ಧನ ಇಬ್ಬರು ಸಂಬಂಧಿಕರು ಹಾಗೂ ಸೌದಿಯಿಂದ ಬಂದ ಚಿತ್ತಾಪೂರ ತಾಲೂಕಿನ ಓರ್ವ ಮತ್ತು ದುಬೈದಿಂದ ಬಂದ ಚಿಂಚೋಳಿ ತಾಲೂಕಿನ ಓರ್ವನಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ನಾಲ್ವರನ್ನು ಇಎಸ್ಐ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈವರೆಗೂ ಮೃತ ವ್ಯಕ್ತಿ ಸಂಬಂಧಿಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಗುರುತಿಸಲಾದ 71 ಮಂದಿ ಜೊತೆಗೆ ಎರಡನೇ ಸಂಪರ್ಕ ಹೊಂದಿದ್ದ 238 ಮಂದಿ ಹಾಗೂ ವಿದೇಶದಿಂದ ಮರಳಿದ 61 ಮಂದಿ ಸೇರಿದಂತೆ ಒಟ್ಟು 370 ಜನರ ಮೇಲೆ ನಿಗಾ ವಹಿಸಲಾಗಿದೆ. ಇಷ್ಟು ಮಂದಿಯಲ್ಲಿ ಎಂಟು ಮಂದಿಗೆ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ಹೋಮ್ ಕ್ವಾರಂಟೈನ್ನಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.
ವಿದೇಶದಿಂದ ಬಂದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಇದಕ್ಕಾಗಿ 24 ಗಂಟೆ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆಗೆ (08472-278604/ 278677) ಕರೆ ಮಾಡಿ ಮಾಹಿತಿ ನೀಡಬಹುದು. ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಜಿಲ್ಲಾಡಳಿತ ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…