ಪಾಪು ಸಾಹಿತ್ಯ ಲೋಕದ ಧ್ರುವತಾರೆ: ವಿಶ್ವಾರಾಧ್ಯ ಸತ್ಯಂಪೇಟೆ.

ಶಹಾಪುರ: ಪಾಟೀಲ ಪುಟ್ಟಪ್ಪನವರು ಸರಳ ಹಾಗೂ ನೇರ ನುಡಿಯ ವ್ಯಕ್ತಿತ್ವದ ಜೊತೆಗೆ ಸಾಹಿತ್ಯ, ಹೋರಾಟ,ಮತ್ತು ಪತ್ರಿಕಾ ರಂಗ ಹೀಗೆ ಹತ್ತಾರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡು ಕನ್ನಡ ಸಾಹಿತ್ಯ ಲೋಕದ ಧ್ರುವತಾರೆಯಾಗಿ ಮೆರೆದವರು ಎಂದು ಸಾಹಿತಿ,ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ.

ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಡಾ. ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸಿದ್ದಲಿಂಗಣ್ಣ ಆನೆಗುಂದಿ ಮಾತನಾಡಿ ಪಾಟೀಲ ಪುಟ್ಟಪ್ಪನವರ ಅಕಾಲಿಕ ಮರಣದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತೀವ್ರ ದುಃಖ ವ್ಯಕ್ತಪಡಿಸಿದರು,ಅವರಂಥ ಅಪ್ರತಿಮ ಪ್ರಾಮಾಣಿಕತೆಗೆ ಸರಿಸಾಟಿ ಯಾರೂ ಇಲ್ಲ ಎಂದು ಬಣ್ಣಿಸಿದರು.ಅಂಥ ಕಷ್ಟದ ಕಾಲದಲ್ಲಿಯೂ ಅವರು ಏಳು ಪತ್ರಿಕೆಗಳು ಪ್ರಕಟಿಸಿ ನಡೆಸುತ್ತಿದ್ದರು.

ಹಿರಿಯ ಸಾಹಿತಿ ಪ್ರೋ. ದೊಡ್ಡಬಸಪ್ಪ ಬಳೂರಗಿಯವರು ಮಾತನಾಡಿ ಪಾಪು ಅವರು ನೇರ ನುಡಿಯ ದಿಟ್ಟ ಬರಹಗಾರ,ಅವರ ಸೃಜನಶೀಲತೆ ಬರವಣಿಗೆಯ ಜೊತೆಗೆ ಅವರ ಸಾಧನೆ ಅನನ್ಯವಾಗಿದ್ದು ಲಕ್ಷಾಂತರ ಶಿಷ್ಯಂದಿರ ಬಳಗ ಹೊಂದಿದ್ದಾರೆ ಎಂದು ಹೇಳಿದರು.ಅವರ ಆದರ್ಶ ತತ್ವಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಶಿವಣ್ಣ ಇಜೇರಿ,ಶರಣ ಸಾಹಿತಿ ಲಿಂಗಣ್ಣ ಪಡಶೆಟ್ಟಿ, ಉದ್ದಿಮೆದಾರರಾದ ಬಸವರಾಜ ಹಿರೇಮಠ,ಗುಂಡಪ್ಪ ತುಂಬಿಗಿ, ನಿವೃತ್ತ ತಹಸೀಲ್ದಾರರಾದ ಸಾಯಿಬಣ್ಣ ಮಡಿವಾಳಕರ,
ಡಾ. ಗುರುರಾಜ್ ಬಳೂರ್ಗಿ ವೀರಭದ್ರಸ್ವಾಮಿ ಅಯ್ಯಾಳ, ಕುಮಾರ್ ಅಲ್ಲಮ್ಮ ಪ್ರಭು ಪಂಪನಗೌಡ ಮಳಗ,ಚೌಡಪ್ಪ ಕೊಲ್ಲೂರು,ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

12 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420