ಸಲಬುರಗಿ: ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೊರೋನಾ ವೈರಸ್ ಕುರಿತು ಯಾರೇ ಸುಳ್ಳು ಸುದ್ದಿ ಹರಡಿಸಿದಲ್ಲಿ ಅಂತಹವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಎಚ್ಚರಿಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ದಿನೆ ದಿನೆ ಕೊರೋನಾ ವೈರಸ್ ನೆಪದಲ್ಲಿ ಕಳೆದ ಎರಡು ದಿನಗಳಿಂದ ಆಂಬುಲೆನ್ಸ್, ನಿನ್ನೆ ಪೆಟ್ರೋಲ್ ಬಂಕ್ ಬಂದ್, ಇಂದು ರಾತ್ರಿ ಗಾಳಿಯ ಔಷಧಿ ಸಿಂಪಡನೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣದ ಮೂಲಕ ಹರಡಿಸಲಾಗುತ್ತಿರುವರಿಗೆ ಎಚ್ಚರಿಕೆ ನೀಡಿದ್ದಾರೆ.