ಜಿಲ್ಲಾಡಳಿತದ ಕ್ರಮಕ್ಕೆ ಶಾಸಕ ಖರ್ಗೆ ಶ್ಲಾಘನೆ.

0
39

ಕಲಬುರಗಿ: ಕೊರೋನ ವೈರಸ್ ಹರಡದಂತೆ ತಡೆಯಲು ಜಿಲ್ಲಾಡಳಿತ ಹಾಗೂ ವೈದ್ಯರು ಶ್ರಮಿಸುತ್ತಿದ್ದಾರೆ ಎಂದು ಅವರ ಕಾರ್ಯವನ್ನು ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಶ್ಲಾಘಿಸಿದ್ದಾರೆ.

ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರೊಂದಗೆ ಜಂಟಿ  ಪತ್ರಿಕಾ ಹೇಳಿಕೆ ನೀಡಿರುವ ಅವರು,‌ ಜಿಲ್ಲೆಯಲ್ಲಿ ವೈರಸ್ ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸೋಂಕು ತಗುಲಿದಾಗ ಚಿಕಿತ್ಸೆ ನೀಡಿದ ವೈದ್ಯರಿಗೂ ಸೋಂಕು ತಗುಲಿದ್ದು ವಿಷಾದನೀಯ ಎಂದು ಆತಂಕ ವ್ಯಕ್ತಪಡಿಸಿದ ಅವರು ಹಲವಾರು ಅಡೆತಡೆಗಳ ನಡುವೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ವೈದ್ಯರು ವೈರಸ್ ಹರಡದಂತೆ ಎಲ್ಲ ಕ್ರಮ ಕೈಗೆತ್ತಿಕೊಂಡಿದ್ದಾರೆ ಇದು ಶ್ಲಾಘನೀಯ ಎಂದು ಕೊಂಡಾಡಿದ್ದಾರೆ.

Contact Your\'s Advertisement; 9902492681

ಕೊರೋನಾ ವೈರಸ್ ತಡೆಗೆ ಎಲ್ಲರೂ  ಪಣತೊಡೋಣ ಎಂದು ಕರೆ ನೀಡಿದ ಶಾಸಕರು, ಸ್ವಾಸ್ಥ್ಯ ಸಮಾಜ‌ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಹೇಳಿದ್ದಾರೆ.

ರೋಗ್ಯ ಇಲಾಖೆ ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್‌ ಪಕ್ಷದ ವತಿಯಿಂದ ಹನ್ನೊಂದು‌ ಸಾವಿರ ಮಾಸ್ಕ್ ವಿತರಿಸಲಾಗಿದೆ  ಎಂದು ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here