ಶಾಸಕ ಸುಭಾಷ್ ಗುತ್ತೇದಾರ ಅಭಿಮಾನಿ ಬಳಗದಿಂದ ಮಾಸ್ಕ್ ವಿತರಣೆ

ಆಳಂದ: ಪಟ್ಟಣದಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಮಾನಿ ಬಳಗದವರಿಂದ ಕೊರೋನಾ ವೈರಸ್‍ನಿಂದ ರಕ್ಷಿಸಿಕೊಳ್ಳಲು ಜನರಿಗೆ ಉಚಿತ ಮಾಸ್ಕ್ ವಿತರಣೆ ಮಾಡಲಾಯಿತು.

ಪಟ್ಟಣದ ಶ್ರೀರಾಮ ಮಾರುಕಟ್ಟೆ, ಗಣೇಶ ಚೌಕ್, ಪುರಸಭೆ ಕಚೇರಿ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ಶಾಸಕರ ಅಭಿಮಾನಿಗಳು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಜನರಿಗೆ ಮತ್ತು ಪುರಸಭೆಯ ಪೌರಕಾರ್ಮಿಕರಿಗೆ ಮಾಸ್ಕ್ ವಿತರಣೆ ಮಾಡಿದರು.

ಜಗತ್ತನ್ನು ಆವರಿಸಿರುವ ಭಯಾನಕ ವೈರಾಣು ಕೊರೋನಾ ವೈರಸ್ ವಿರುದ್ಧ ಎಲ್ಲರು ಹೋರಾಡುವುದು ಅಗತ್ಯವಾಗಿದೆ ಜನತೆ ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ ಸರ್ಕಾರದ ಜೊತೆ, ಅಧಿಕಾರಿಗಳ ಜೊತೆ ಕೈ ಜೋಡಿಸಿ ಸಹಕಾರ ನೀಡುವುದು ತುರ್ತು ಕೆಲಸವಾಗಬೇಕಿದೆ ಎಂದು ಜನರಿಗೆ ಮನವರಿಕೆ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಸಂಕಷ್ಟದ ಸಮಯದಲ್ಲಿ ಜನತೆಯ ಒಳಿತಿಗಾಗಿ ಎಲ್ಲ ಪ್ರಯತ್ನವನ್ನು ಮಾಡುತ್ತಿವೆ. ವೈದ್ಯಕೀಯ ಲೋಕವು ಈ ವೈರಸಗೆ ಮದ್ದು ಕಂಡು ಹಿಡಿಯಲು ನಿರಂತರವಾಗಿ ಯತ್ನಿಸುತ್ತಿದೆ ಆದರೂ ಕೂಡ ನಾವು ನಮ್ಮ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಕೆಲವು ನಿಯಮಗಳನ್ನು ಸ್ವಯಂ ಪ್ರೇರಿತವಾಗಿ ಅಳವಡಿಸಿಕೊಳ್ಳುವುದರಿಂದ ಈ ವೈರಸ್‍ನಿಂದ ಮುಕ್ತಿ ಪಡೆಯಬಹುದಾಗಿದೆ ಜೊತೆಗೆ ದಿನನಿತ್ಯ ನಿಯಮಿತವಾಗಿ ಕೈಗಳನ್ನು ತೊಳೆಯಬೇಕು ಎಂದು ಜನರಿಗೆ ಮಾಹಿತಿ ನೀಡಿದರು.

ಗಿರೀಶ ತಡಕಲ್, ದಯಾನಂದ ಮೂಲಗೆ, ಮಹೇಶ ಮುನ್ನೊಳ್ಳಿ, ಮಹೇಶ ಗೌಳಿ, ಅರವಿಂದ ನಾಟೀಕಾರ, ಮಂಜುನಾಥ ಗುತ್ತೇದಾರ, ತಿಪ್ಪೇರುದ್ರ ಮಠಪತಿ ಮಾಸ್ಕ್ ನೀಡಿದರು. ಈ ಸಂದರ್ಭದಲ್ಲಿ ಮುಬಾರಕ ಮೂಲಗೆ, ಮಹಾಂತೇಶ ಪೂಜಾರಿ, ರೋಹಿತ ಬಂಡಗಾರ, ರವಿ ಪಾಟೀಲ, ಓಂಕಾರ ಕಾಂಬಳೆ, ಮೋಹನ ಪರೀಟ್, ಗಣೇಶ ಗೌಳಿ, ಖಂಡು ಬಲ್ವಾನಿ , ಗಣೇಶ ಭೋಸಲೆ, ಉಮೇಶ ಭೋಸಲೆ, ಶ್ಯಾಮ ಉಮರೆ, ಕಾರ್ತಿಕ ರಾಠೋಡ, ಅಮೋಲ ಘನಾತೆ , ಶುಭಂ ರಂಗದಾಳ, ಭೀಮಾ ಜಾಧವ, ನಿತೀನ ಬಲ್ವಾನಿ ಸೇರಿದಂತೆ ಇತರರು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420