ಬಿಸಿ ಬಿಸಿ ಸುದ್ದಿ

ಕೊರೋನಾ ತಡೆ ಹಿನ್ನೆಲೆ: ಆಧಾರ್ ಕಾರ್ಡ್ ಓಟಿಪಿ ಪಡೆದು ಪಡಿತರ ವಿತರಣೆಗೆ ಆದೇಶ

ಬೆಂಗಳೂರು: ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಜೀವಮಾಪನ (ಬಯೋ ಮೆಟ್ರಿಕ್) ಸಂಗ್ರಹಣೆ ಮೂಲಕ ಪಡಿತರ ವಿತರಿಸುವುದರ ಬದಲು ಆಧಾರ್ ಆಧಾರಿತ ಮೊಬೈಲ್ ಓ.ಟಿ.ಪಿ. ಮೂಲಕ ಪಡಿತರ ವಿತರಿಸಲು ಆಹಾರ ಸರಬರಾಜು ಇಲಾಖೆಯ ಆಯುಕ್ತರು ಆದೇಶ ನೀಡಿದ್ದಾರೆ.

ಆದ್ದರಿಂದ ಆಧಾರ್ ಆಧಾರಿತ ಮೊಬೈಲ್ ಓ.ಟಿ.ಪಿ ಮೂಲಕ ಪಡಿತರ ವಿತರಣೆಯನ್ನು ಜಾರಿಗೆತರಲಾಗಿದೆ. ಇದರಲ್ಲಿ ಪಡಿತರ ಚೀಟಿದಾರರ ಮೊಬೈಲ್ ಸಂಖ್ಯೆ ಆಧಾರ್‌ನಲ್ಲಿ ನೋಂದಾಯಿಸಲ್ಪಟ್ಟಿದ್ದರೆ ಮಾತ್ರ ಅಂತಹ ಪಡಿತರ ಚೀಟಿದಾರರ ಮೊಬೈಲ್‌ಗೆ ಒ.ಟಿ.ಪಿ ಬರಲಿದೆ, ಒ.ಟಿ.ಪಿಯನ್ನು ನೋಂದಣಿ ಮಾಡಿ ಪಡಿತರ ವಿತರಿಸಬಹುದು, ಆದರೆ ಒಂದು ಪಡಿತರ ಚೀಟಿಗೆ ನೀಡಿದ ಮೊಬೈಲ್ ಸಂಖ್ಯೆಯನ್ನು ಇನ್ನೊಂದು ಪಡಿತರ ಚೀಟಿಗೆ ನೀಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಒಂದೊಮ್ಮೆ ಪಡಿತರ ಚೀಟಿದಾರರ ಕುಟುಂಬ ಸದಸ್ಯರಲ್ಲಿ ಮೊಬೈಲ್ ಇಲ್ಲದೇ ಇದ್ದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಕಡೆಯ ಪ್ರಯತ್ನವಾಗಿ ಈಗಾಗಲೇ ಲಭ್ಯವಾಗಿರುವು ಬೆರಳಚ್ಚು ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಆದರೆ ಇದಕ್ಕೆ ಶುಚಿತ್ವ ಕಾಪಾಡುವ ಸಂಬಂಧವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ನೀರು ಮತ್ತು ಶುದ್ದೀಕರಿಸುವ ಸಾಬೂನು/ಸ್ಯಾನಿಟೈಸರ್‌ ಕಡ್ಡಾಯವಾಗಿ ಇಡತಕ್ಕದ್ದು. ಪಡಿತರ ಚೀಟಿದಾರರು ಬೆರಳಚ್ಚು ನೀಡುವ ಮೊದಲು ಕೈಯನ್ನು ಶುದ್ಧವಾಗಿ ತೊಳೆದುಕೊಳ್ಳಲು ನಿರ್ದೇಶನ ನೀಡುವುದು ಹಾಗೂ ಬೆರಳಚ್ಚು ಸಂಗ್ರಹಿಸುವ ಪಾರದರ್ಶಕ ಸ್ಥಳವನ್ನು ಪ್ರತಿ ಪಡಿತರ ಚೀಟಿದಾರ ಬೆರಳಚ್ಚು ನೀಡುವ ಮೊದಲು ಶುದ್ದೀಕರಣ ಮಾಡುವಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago