ಕೋಲ್ಕತಾದಲ್ಲಿ ಲಾಕ್ ಡೌನ್: ಪೊಲೀಸರ ಲಾಠಿ ಏಟಿಗೆ ವ್ಯಕ್ತಿ ಬಲಿ?

0
40

ಕೋಲ್ಕತಾ: ದೇಶದೆಲೆಡೆ ಕೊರೋನಾ ಹರಡುವಿಕೆ ತಟೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಿಸಿದೆ. ಹೌರಾ ಜಿಲ್ಲೆಯಲ್ಲಿ ಹಾಲು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಲಾಠಿಯಿಂದ ಥಳಿಸಿದ ಪರಿಣಾಮ  ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಬುಧುವಾರ ರಾತ್ರಿ ನಡೆದಿದೆ ಎಂದು ವರಿದಯಾಗಿದೆ.

ಹೌರಾ ಪಟ್ಟಣದ ನಿವಾಸಿ ಲಾಲ್ ಸ್ವಾಮಿ ಎಂದು ಗುರುತಿಸಲಾಗಿದ್ದು, ನನ್ನ ಪತಿ ಹಾಲು ತರಲು ಹೋಗಿದ್ದಾಗ ಜನಸಂದಣಿ ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ನನ್ನ ಪತಿ ಮೃತಪಟ್ಟಿದ್ದಾರೆ ಎಂದು ಲಾಲ್ ಸ್ವಾಮಿ ಪತ್ನಿ ಆರೋಪಿಸಿದ್ದಾರೆ.  ಆದರೆ ಈ ಆರೋಪವನ್ನು ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕುತ್ತಿದ್ದು, ಲಾಲ್ ಸ್ವಾಮಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ಘಟನೆ ನಂತರ ಬೀದಿಗೆ ಇಳಿದು ಜನರು ಪ್ರತಿಭಟನೆ ನಡೆಸಿ ಗಲಾಟೆ ನಡೆಸಿ, ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲು ಮುಂದಾದಗ ಜನನರನ್ನು ಲಾಠಿ ಜಾರ್ಜ್ ಮಾಡುವ ಮೂಲಕ ಚದುರಿಸಿದರು ಎಂದು ತಿಳಿದು ಬಂದಿದೆ.  ಘಟನೆ ಬಗ್ಗೆ ಮಾತನಾಡಿದ ಪೊಲೀಸರು ಜನರು ದಿನನಿತ್ಯದ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಅನಗತ್ಯವಾಗಿ ಹೊರಗೆ ತಿರುಗಾಡುತ್ತಿದ್ದಾರೆ ಅವರು ಮಾಹಿತಿ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here