ಬಿಸಿ ಬಿಸಿ ಸುದ್ದಿ

ಕೊರೋನಾ: ಏ.14ರ ವರೆಗೆ ಜನತಾ ಕರ್ಪ್ಯೂಗೆ ಕೂಡಿ ಸ್ವಾಗತ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರನ್ನು ಕರೋನಾದಿಂದ ದೂರವಿರಲು ಕರೋನಾ ಹರಡದಂತೆ ದೇಶದ ಜನತೆಗೆ ಏಪ್ರೀಲ್ ೧೪ ರ ವರೆಗೆ ಜನತಾ ಕರ್ಫ್ಯೂ ಆದೇಶಿಸಿ ಜನರು ಮನೆಯಿಂದ ಹೊರಬರದಂತೆ ದಿಗ್ಬಂಧನಕ್ಕೆ ಆದೇಶಿಸಿದಕ್ಕೆ ಕಲ್ಯಾಣ ಕರ್ನಾಟಕ ಕೋಲಿ ಸಮಾಜವು ಸ್ವಾಗತಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಶಾಂತಪ್ಪ ಕೂಡಿ ಅವರು ತಿಳಿಸಿದ್ದಾರೆ.

ದೇಶದ ಜನತೆಯು ನಮ್ಮನ್ನು ನಾವು ಕಾಪಾಡುವಗೋಸ್ಕರ್ ಕಟ್ಟು ನಿಟ್ಟಾಗಿ ಆದೇಶವನ್ನು ಪಾಲಿಸಿ ಮನೆಯಿಂದ ಯಾರು ಹೊರಗಡೆ ಬರಬಾರದು ಎಂದು ಕೂಡಿ ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ. ದೇಶದ ಅನೇಕ ಹಿಂದುಳಿದ ಬಡ ಕೋಲಿ ಕಾರ್ಮಿಕರು ದಿನಗೂಲಿಗಳು ಬಿದಿವ್ಯಾಪಾರಿಗಳು ಆಟೋ ರಿಕ್ಷಾ ನಡೆಸುವವರು, ಮನೆ ಕೆಲಸ ಮಾಡುವ ಕೆಲಸಗಾರರಿಗೆ ಒಂದು ಹೊತ್ತು ಹೊಟ್ಟೆ ತುಂಬಿಸಿಕೊಳ್ಳುವುದು ಕಷ್ಟಕರವಾಗಿದೆ ಅದಕ್ಕಾಗಿ ಪ್ರಧಾನ ಮಂತ್ರಿ , ಮಂತ್ರಿಗಳಲ್ಲಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಲಕ್ಷಾಂತರ ಜನ ಕೊಲಿ ಕಾರ್ಮಿಕರು ಕಾರ್ಮಿಕ ಕಾರ್ಡ್ ಮಾಡಿಸಿರುವುದಿಲ್ಲಾ, ತಾವು ಪ್ರಕಟಿಸಿರುವ ಕಾರ್ಮಿಕ ಬಡ ಜನತೆ ಖಾತೆಗೆ ಒಂದು ಸಾವಿರ ರೂ. ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಅದು ಯಾವುದಕ್ಕೂ ಸರಿ ಹೋಗುವುದಿಲ್ಲಾ ಮತ್ತು ವಿಷೇಶವಾಗಿ ಕಲ್ಯಾಣ ಕರ್ನಾಟಕದ ಕೂಲಿ ಕಾರ್ಮಿಕರು ಕಾರ್ಮಿಕರ ಕಾರ್ಡ್ ಮಾಡಿಸಿರುವುದಿಲ್ಲಾ ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿ ಬಿ.ಪಿ.ಎಲ್,ಕಾರ್ಡ್ ಹೊಂದಿರುವ ಕಡು ಬಡವರ ಖಾತೆಗೆ ಪ್ರತಿ ಕುಟುಂಬಕ್ಕೆ ೫೦೦೦ ರೂ. ಅವರಿಗೆ ನೇರವಾಗಿ ಜಮಾ ಮಾಡಬೇಕೆಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಹಾಗೂ ಕಲ್ಯಾಣ ಕರ್ನಾಟಕ ಕೋಲಿ ಸಮಾಜದ ಸಂಘಟನಾ ಸಮಿತಿಯ ಅಧ್ಯಕ್ಷ ಶಾಂತಪ್ಪ ಕೂಡಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

14 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

17 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

20 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago