ಕೇಂದ್ರ ಸರ್ಕಾರವು ಕೂರೋನಾ ವೈರಸ್ ನಿಯಂತ್ರಿಸಲು ಪರಿಹಾರ ಪ್ಯಾಕೇಜ್‌ ನೀಡಿರುವುದು ಸ್ವಾಗತಾರ್ಹವಾದದು ಈಗಾಗಲೇ ದಿನನಿತ್ಯದ ಆವಶ್ಯಕ ಸೇವೆಗಳ ಹೊರತಾಗಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳೂ ಉದ್ಯಮಗಳೂ ಬಾಗಿಲು ಮುಚ್ಚಿವೆ ಈ ಬಂದ್‍ನ ನೇರ ಹೊಡೆತ ಬೀಳುತ್ತಿರುವುದು ಆಯಾ ದಿನ ದುಡಿದರೆ ಮಾತ್ರ ಊಟ ಸಿಗುವ ದಿನಗೂಲಿಗಳು ಮತ್ತು ಆಸರೆಯೇ ಇಲ್ಲದ ನಿರ್ಗತಿಕ ಒಂಟಿಜೀವಗಳ ಮೇಲೆ ಸಂಘಟಿತ ವಲಯದ ಕಾರ್ಮಿಕರಿಗೆ ಕಷ್ಟ ಅನ್ನಿಸಬಹುದಾದರೂ ಅಸಂಘಟಿತ ವಲಯದ ಕಾರ್ಮಿಕರ ಗೋಳು ಇನ್ನಷ್ಟು ವಿಪರೀತವಾಗಿದೆ ದುಡಿಯಲು ಕೆಲಸವೇ ಇಲ್ಲದಿದ್ದರೆ ಅವರು ಬದುಕುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತೀದೆ ಕೊರೊನಾ 2 ವೈರಸ್‍ಗಿಂತ ಭೀಕರವಾಗಿ ಹಸಿವು ಇವರನ್ನು ಕಾಡಬಹುದು ಹಳ್ಳಿ ಪ್ರದೇಶಗಳಲ್ಲಿ  ಕೃಷಿ ಕೂಲಿಕಾರ್ಮಿಕರಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯೂ ಸ್ಥಗಿತಗೊಂಡಿದೆ.

ದೇಶದಾದ್ಯಂತ ಕೋಟ್ಯಂತರ ಸಂಖ್ಯೆಯಲ್ಲಿರುವ ದಿನಗೂಲಿಗಳು ಗುತ್ತಿಗೆ ನೌಕರರು ಸಣ್ಣಪುಟ್ಟ ಸ್ವಉದ್ಯೋಗಗಳನ್ನು ನಡೆಸಿ ಅಂದಿನ ಅನ್ನವನ್ನು ಅಂದೇ ಗಳಿಸಿಕೊಳ್ಳುವ ಜನರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಾಗಿದೆ ಒಂದು ವರದಿಯ ಅಂದಾಜಿನ ಪ್ರಕಾರ ಉದ್ಯೋಗ ಖಾತರಿ ಯೋಜನೆಯಡಿ ದೇಶದಲ್ಲಿ 26 ಕೋಟಿ ಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದರು ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಯೋಜನೆಯಡಿ 7.75 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಇದೇ  ಇವರೆಲ್ಲ ಈಗ ಅತಂತ್ರರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇವರತ್ತ ತುರ್ತು ಗಮನ ಹರಿಸಬೇಕಾದ ಅಗತ್ಯವಿದೆ ಕೇಂದ್ರ ಸರ್ಕಾರ ರೂ 1.70 ಲಕ್ಷ ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ನೀಡಿದೆ ಜನಧನ್ ಖಾತೆ ಹೊಂದಿರುವ ಮಹಿಳೆಯರಿಗೆ ತಿಂಗಳಿಗೆ ರೂ 500ರಂತೆ ಮೂರು ತಿಂಗಳು ಹಣ ನೀಡುವುದು 80 ಕೋಟಿ ಬಡವರಿಗೆ 5 ಕೆ.ಜಿ. ಉಚಿತ ಆಹಾರ ಪದಾರ್ಥ, ನೇರ ನಗದು ವರ್ಗಾವಣೆ ಯೋಜನೆಯಡಿ 8.6 ಕೋಟಿ ರೈತರಿಗೆ ಏಪ್ರಿಲ್ ಮೊದಲ ವಾರ ತಲಾ ರೂ. 2,000 ನೀಡುವುದು ಕಾರ್ಮಿಕರ 3 ತಿಂಗಳ ಇಪಿಎಫ್ ಮೊತ್ತವನ್ನು ಸರ್ಕಾರವೇ ಭರಿಸುವುದು ಮುಂತಾದ ಕ್ರಮಗಳು ಈ ಪ್ಯಾಕೇಜ್‍ನಲ್ಲಿ ಸೇರಿಸಿದರಿಂದ ಉತ್ತಮವಾದದ್ದು ದೇಶದಾದ್ಯಂತ 3.5 ಕೋಟಿ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಅವರಿಗೆ ಮೀಸಲಿಟ್ಟಿರುವ ₹ 31,000 ಕೋಟಿಯಷ್ಟು ನಿಧಿಯನ್ನು  ಬಳಸಿಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸಚಿವೆ ಸೂಚನೆ ನೀಡಿರುವುದು ಸ್ಪಷ್ಟ ನಿರ್ಧಾರವಾಗಿದೆ ಪ್ರತಿದಿನ ಮೂಟೆ ಹೊತ್ತು ಕೂಲಿ ಪಡೆಯುವ ಕಾರ್ಮಿಕರ ಸಂಖ್ಯೆ ರಾಜ್ಯದಲ್ಲಿ ಸುಮಾರು 4 ಲಕ್ಷದಷ್ಟಿದೆ.

ಇದರಲ್ಲಿ, ಎಪಿಎಂಸಿ ಹಮಾಲಿಗಳು ಸಂಘಟಿತ ವಲಯದಡಿ ಬರುತ್ತಾರೆ. ಅವರ ಸಂಖ್ಯೆ ಹೆಚ್ಚೆಂದರೆ 25 ಸಾವಿರ ದಾಟುವುದಿಲ್ಲ. ಬಸ್‌ ನಿಲ್ದಾಣ, ಮಾರುಕಟ್ಟೆ, ಮಿಲ್‍ ಮುಂತಾದೆಡೆ ಮೂಟೆ ಹೊರುವ ಕಾರ್ಮಿಕರಿಗೆ ಸರ್ಕಾರದ ಈ ಪರಿಹಾರ ತಲುಪುವ ಬಗೆ ಹೇಗೆ? ರಾಜ್ಯದಲ್ಲಿ ಬಿಸಿಯೂಟದ ಕಾರ್ಮಿಕರು ಸುಮಾರು ಒಂದು ಲಕ್ಷದಷ್ಟಿದ್ದು, ಶಾಲೆಗಳು ಮುಚ್ಚಿರುವುದರಿಂದ ಅವರೂ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ಸಹಿತ ರಾಜ್ಯದಾದ್ಯಂತ ಬಾಗಿಲು ಮುಚ್ಚಿರುವ ಗಾರ್ಮೆಂಟ್ಸ್‌ ಕಾರ್ಮಿಕರ ಸ್ಥಿತಿಯೂ ಇದಕ್ಕಿಂತ ಭಿನ್ನವಲ್ಲ. ಬೀದಿ ಬದಿ ವ್ಯಾಪಾರಿಗಳ ಪರಿಸ್ಥಿತಿ ಇನ್ನಷ್ಟು ದಯನೀಯವಾಗಿದೆ. ಪ್ಲಾಂಟೇಶನ್ ಕಾರ್ಮಿಕರು, ಬೀಡಿ ಕಾರ್ಮಿಕರು, ಆಟೊ ಚಾಲಕರು, ಕಾರು ಬಾಡಿಗೆಗೆ ಓಡಿಸುವ ಚಾಲಕರ ಭವಿಷ್ಯವೂ ಅತಂತ್ರವಾಗಿದೆ. ಈ ಬಗೆಯ ಎಲ್ಲ ವರ್ಗಗಳ ನೋವಿಗೂ ಸರ್ಕಾರ ಗಮನಹರಿಸಬೇಕು.

ಸಂತೋಷ ಜಾಬೀನ್ ಸುಲೇಪೇಟ
ಸಾಮಾಜಿಕ ಚಿಂತಕ ಹಾಗೂ ಹೋರಾಟಗಾರ
emedialine

View Comments

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

44 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420