ಬಿಸಿ ಬಿಸಿ ಸುದ್ದಿ

ಡಾ. ಅಂಬೇಡ್ಕರ್ ಜಯಂತಿ ಆಚರಣೆಯ ಭಿತ್ತಿ ಪತ್ರಗಳು ಬಿಡುಗಡೆ

ಸುರಪುರ:  ಇಂದು ನಗರದ ಡಾ: ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ  ಬುದ್ಧ ಬಸವರ ಸ್ಮರಣೆ ಹಾಗು ಡಾ:ಬಾಬಾ ಸಾಹೇಬ್ ಅಂಬೇಡ್ಕರರ ೧೨೮ನೇ ಜಯಂತಿ ಆಚರಣೆ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಸಮಿತಿಯ ಅಧ್ಯಕ್ಷ ವೆಂಕಟೇಶ್ ಹೊಸಮನಿ ಮಾತನಾಡಿ ಬುದ್ಧ ಬಸವಣ್ಣ ಮತ್ತು ಅಂಬೇಡ್ಕರ್‌ರು ಈ ಲೋಕ ಕಂಡ  ಮಹಾ ಮಾನವತಾವಾದಿಗಳು.ಇಂತ ಮಹನಿಯರುಗಳ ತಾಲ್ಲೂಕು ಮಟ್ಟದ ಜಯಂತಿಯನ್ನು ಈ ತಿಂಗಳ ೨೦ನೇ ತಾರೀಖಿನಂದು ವಿಜೃಂಭಣೆಯಿಂದ ಆಚರಿಸಲಾಗುವುದು.ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಉಸ್ತುರಿಯ ಕೊರಣೇಶ್ವರ ‌ಸ್ವಾಮಿಜಿ ಹಾಗು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಅಧ್ಯಕ್ಷೆ ಅಕ್ಕಾ ಕೆ.ನೀಲಾ ಮತ್ತಿತರರು ಭಾಗವಹಿಸಿ ಬುದ್ಧ ಬಸವಣ್ಣ ಅಂಬೇಡ್ಕರ್‌ರ ಬಗ್ಗೆ ಮಾತನಾಡಲಿದ್ದಾರೆ.ಆದ್ದರಿಂದ ಕಾರ್ಯಕ್ರಮದಲ್ಲಿ ಬುದ್ಧ ಬಸವಣ್ಣ ಮತ್ತು ಅಂಬೇಡ್ಕರರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಕಟ್ಟಿಮನಿ,ಮಾನಪ್ಪ ಕರಡಕಲ್,ನಾಗಣ್ಣ ಕಲ್ಲದೇವನಹಳ್ಳಿ, ಭೀಮರಾಯ ಸಿಂಧಿಗೇರಿ, ನಿಂಗಣ್ಣ ಗೋನಾಲ,ಮಾಳಪ್ಪ ಕಿರದಹಳ್ಳಿ, ರಾಹುಲ್ ಹುಲಿಮನಿ,ಶಿವರಾಜ ಪಾಣೆಗಾಂವ್,ಯಲ್ಲಪ್ಪ ಚಿನ್ನಾಕಾರ,ಧರ್ಮರಾಜ ಬಡಿಗೇರ,ರಾಜು ಕಟ್ಟಿಮನಿ, ಮಲ್ಲಿಕಾರ್ಜುನ ವಾಗಣಗೇರಾ, ವಿಶ್ವನಾಥ ಹೊಸಮನಿ, ರಮೇಶ ಅರಕೇರಿ, ರಮೇಶ ನಾಗರಾಳ,ರಾಮಣ್ಣ ಶೆಳ್ಳಿಗಿ, ಗೌತಮ್ ಬಡಿಗೇರ, ಮಲ್ಲಿಕಾರ್ಜುನ ಮುಷ್ಠಳ್ಳಿ,ಚಂದಪ್ಪ ಪಂಚಮ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

36 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

39 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

42 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago