ಮಾಂಸ ನೇತಾಕಿ ಮಾರಾಟ ಮಾಡಿದರೆ ಕ್ರಮ: ತಹಸೀಲ್ದಾರ

ಚಿಂಚೋಳಿ: ಸಾರ್ವಜನಿಕರ ಹಿತದೃಷಿಯಿಂದ ಇಂದಿನಿಂದ ನಿತ್ಯ ಬೆಳಿಗ್ಗೆ ೭ರಿಂದ ರಾತ್ರಿ ೭ ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಜತೆಗೆ ತರಕಾರಿ, ಹಣ್ಣು-ಹಂಪಲ ಹಾಗೂ ಮಾಂಸ ಮಾರಾಟ ಮಾಡಲು ಬೆಳಿಗ್ಗೆ ೭ರಿಂದ ೧೧ಗಂಟೆಯ ವರೆಗೆ ರಿಯಾತಿ ನೀಡಲಾಗಿದೆ. ಮಾಂಸ ಮಾರಾಟಗಾರರು ಮಾಂಸ ನೇತಾಕಿ ಮಾರಾಟ ಮಾಡುವವರಿಗೆ ಮುಲಾಜು ಇಲ್ಲದೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ ಅರುಣಕುಮಾರ ಕುಲಕರ್ಣಿ ಖಡಕ್ ಸೂಚನೆ ನೀಡಿದರು.

ಇಲ್ಲಿಯ ತಹಸೀಲ್ ಆವರಣದಲ್ಲಿ ಶುಕ್ರವಾರ ಚಿಂಚೋಳಿ ಪಟ್ಟಣದ ವರ್ತಕರ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದ ಅವರು, ನಿಮ್ಮಲ್ಲಿ ಬರುವ ಗ್ರಾಹಕರಿಗಾಗಿ ತಮ್ಮ ತಮ್ಮ ಅಂಗಡಿಗಳ ಮುಂದುಗಡೆ ಅಂತರ ಕಾಯ್ದುಕೊಳ್ಳಲು ಸುಮಾರು ೩ ಮೀಟರ್ ಅಂತರ ಮಾರ್ಕ ಮಾಡಬೇಕು ಮತ್ತು ಕೈತೊಳೆಯಲು ನೀರು, ಸಾಬೂನು ಅಥವಾ ಸೆನಿಟೆಜರ್ ಕಡ್ಡಾಯವಾಗಿ ಇಡಬೇಕು ಜತೆಗೆ ತಾವುಗಳು ಮಾಸ್ಕ್ ಹಾಕಿಕೊಂಡು ವ್ಯವಹಾರ ಮಾಡಬೇಕು ಗ್ರಾಹಕರಿಗೂ ಮಾಸ್ಕ್ ಧರಿಸಲು ತಿಳಿಸಬೇಕು ಎಂದು ಹೇಳಿದರು.

ತಾಲೂಕಾ ಆರೋಗ್ಯ ಅಧಿಕಾರಿ ದೀಪಕ ಪಾಟೀಲ ಮಾತನಾಡಿ, ತಾವು ತಮ್ಮ ಮನೆಗಳಲ್ಲೂ ತಮ್ಮ ಮನೆ ಸದಸ್ಯರುಗಳ ನಡುವೆ ಕನಿಷ್ಠ ೩ ಮೀಟರ್ ದೂರ ಅಂತರ ಕಾಯದುಕೊಳ್ಳಬೇಕು. ತಮ್ಮ ಅಕ್ಕ-ಪಕ್ಕದ ಮನೆಯವರಲ್ಲಿ ಯಾರಾದರೂ ಹೊರ ದೇಶದಿಂದ ಅಥವಾ ಬೇರೆ ಜಿಲ್ಲೆಯಿಂದ ಬಂದಲ್ಲಿ ಕೂಡಲೆ ತಹಸೀಲ್ 08475-273017 ಅಥವಾ 9741970999 ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸಿಪಿಐ ಎಚ್ ಎಂ ಇಂಗಳೇಶ್ವರ ಮಾತನಾಡಿ, ಸಾರ್ವಜನಿಕರು ತೊಂದರೆ ಅನುಭವಿಸಬಾರದೆಂದು ಸರಕಾರ ನಿಮಗೆ ದಿನುಸು, ಹಣ್ಣು-ಹಂಪಲ ಖರೀದಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಸಾರ್ವಜನಿಕರು ಈ ಅವಕಾಶ ದುರುಪಯೋಗ ಮಾಡಿಕೊಂಡು ಅನಗತ್ಯವಾಗಿ ರಸ್ತೆಗಿಳಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಕೋರೋನಾ ವೈರಸ್ ತಡೆಗಟ್ಟಲು ಸರಕಾರ ಹರಸಾಹಸ ಮಾಡುತ್ತಿದೆ. ಆ ಕಾರಣಕ್ಕಾಗಿ ಎಪ್ರಿಲ್ ೧೪ ರವರೆಗೆ ಜನರಿಗೆ ಮನೆಯಲ್ಲಿಯೇ ಇರಲು ಮನವಿ ಮಾಡಲಾಗಿದ್ದು, ಮಂದಿರ, ಮಸೀದಿ, ಚರ್ಚ ಬಂದ್ ಮಾಡಲಾಗಿದೆ. ಕಾನೂನು ಮೀರಿ ಯಾರಾದರೂ ದೇವಸ್ಥಾನ, ನಮಾಜ ಮಾಡಲು ಹೋದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420