ಕಲಬುರಗಿ: ಲೋಕಸಭಾ ಚುನಾವಣಾ ಫಲಿತಾಂಶ ಬಂದ ಮೇಲೆ ರಾಜ್ಯದಲ್ಲಿ ದೊಡ್ಡ ಭೂಕಂಪ ಆಗಲಿದ್ದು, ದುಶ್ಶಾಸನ, ದುರ್ಯೋಧನ ಎಲ್ಲಾನೂ ಪ್ರಿಯಾಂಕ ಖರ್ಗೇನೇ ಆಗತಾರೆ, ಮಗನ ಕಾರಣಕ್ಕೆ ಅಪ್ಪ ಮಲ್ಲಿಕಾರ್ಜುನ ಖರ್ಗೆ ಸೋಲಲಿದ್ದಾರೆ, ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗೆಲ್ಲೋದು ಖಚಿತ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದ್ದರು.
ಅವರು ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖರ್ಗೆ ಅವರಿಗೆ ಮಗನ ಮೇಲಿನ ವ್ಯಾಮೋಹಕ್ಕೆ ಪಕ್ಷ ಹಾಗೂ ಪಕ್ಷದ ನಾಯಕರಿಗೆ ತುಳಿಯುತಾ ಬಂದಿದ್ದಾರೆ ಎಂದು ಆರೋಪಿಸಿ, ಸೋಲಿಲದ ಸರದಾರನಿಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರು ಸೋಲಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದರು.
ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳಲ್ಲಿ ಬಿಜೆಪಿ ಗೇಲ್ಲುವುದು ಖಚಿತ. 23ರ ಫಲಿತಾಂಶದ ನಂತರ ರಾಜ್ಯ ಸೇರಿದಂತೆ ಜಿಲ್ಲೆಗಳ ರಾಜಕೀಯದಲ್ಲಿ ಭೂಕಂಪ ಆಗಲಿದೆ ಎಂದರು.
ಸೋತ ಪೈಲ್ವಾನರು ತೊಡೆತಟ್ಟುತ್ತಿದ್ದಾರೆ ಎಂಬ ಖರ್ಗೆ ಟೀಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರ ಎಲ್ಲಾ ಆರೋಪಗಳಿಗೆ 23 ರಂದು ಲೋಕಸಭಾ ಫಲಿತಾಂಶ ಉತ್ತರಕೊಡಲಿದೆ ಎಂದು ಪ್ರತಿಕ್ರಿಯಿಸಿದರು. ಚಿಂಚೋಳಿ ಉಪ ಚುನಾವಣೆ ಪ್ರಚಾರದ ಕುರಿತು ಮಾತನಾಡಿ, ಅನಾರೋಗ್ಯದ ಕಾರಣದಿಂದ ನಾನು ಪ್ರಚಾರಕ್ಕೆ ಬಂದಿಲ್ಲ. ನಾಳೆಯಿಂದ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸೂರ್ಯ ಕಾಂತ್ ನಾ ಕೇದಾರ್ ಅವ್ವನ ಮ್ಯಾಕೇರಿ ಪಕ್ಷೇತರ ಅಭ್ಯರ್ಥಿ ಶ್ರೀಮತಿ ಭಾಗ್ಯ ಸಂತೋಷ್ ತಳವಾರ್ ದೇವಿಂದ್ರ ರೆಡ್ಡಿ ಸಂಗಣ್ಣ ಇಜೇರಿ ಬಸವರಾಜ್ ಗುಂಡ ಲಗೇರಿ ರೇವಣಸಿದ್ದಪ್ಪ ಆಲ್ ಬಾವಿ ರೋಹಿತ್ ಕಲ್ಲೂರ್ ಅನಿತಾ ಕೊರಬ ಮಲ್ಲಿಕಾರ್ಜುನ್ ಕೃಷ್ಣ ಜಿ ಬಸವರಾಜ್ ಸೊಪ್ಪುಗಳ ಚೆನ್ನಪ್ಪ ಚಿನ್ನು ಮಳ್ಳಿ ನಿಂಗಣ್ಣ ಬಸಯ್ಯ ಗುತ್ತೇದಾರ್ ದೇವಿಂದ್ರ ಜಮಾದಾರ್ ಸಂತೋಷ್ ತಳವಾರ್ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…