ಸುರಪುರ: ನಗರದಲ್ಲಿರುವ ವಿವಿಧ ಬಡಾವಣೆಗಳಲ್ಲಿನ ಕಾರ್ಮಿಕರು,ದಿನಗೂಲಿಯವರು.ನಿರ್ಗತಿಕರು,ಆಸ್ಪತ್ರೆಗೆ ಆಗಮಿಸಿದ ರೋಗಿಗಳು ಮತ್ತು ಸಿಬ್ಬಂದಿಗಳಿಗೆ ಹಾಗು ಕೊರೊನಾ ನಿರ್ಮೂಲನೆಗೆ ನಿರಂತರಾವಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ರಾಜುಗೌಡ ಟೀಮ್ ಸೇವಾ ಸಮಿತಿ ವತಿಯಿಂದ ಅನ್ನ ನೀರು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರ್ಗಿ ವಿವಿಯ ಸಿಂಡಿಕೇಟ್ ಸದಸ್ಯ ಗಂಗಾಧರ ನಾಯಕ ಮಾತನಾಡಿ,ಇಂದು ಕೊರೊನಾ ಭೀತಿಯಿಂದ ದೇಶದಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದರಿಂದ ಅನೇಕ ಜನ ಕಾರ್ಮಿಕರು,ಬಡವರು ಮತ್ತು ನಿರ್ಗತಿಕರಿಗೆ ಸರಿಯಾದ ಅನ್ನ ನೀರು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಮನಗಂಡಿರುವ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರ ಮಾರ್ಗದರ್ಶನದಲ್ಲಿ ಇಂದು ನಗರದಲ್ಲಿರುವ ಅನೇಕ ವಾರ್ಡುಗಳಲ್ಲಿನ ಕಾರ್ಮಿಕರಿಗೆ,ಶ್ರಮಿಕರಿಗೆ ಮತ್ತು ಗ್ರಾಮೀಣ ಭಾಗದಿಂದ ಕೊರೊನಾ ಪರೀಕ್ಷೆಗಾಗಿ ಆಗಮಸಿದ ಜನತೆಗೆ ಮತ್ತು ಪೆಟ್ರೋಲ್ ಬಂಕ್ಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ನಮಗಾಗಿ ತಮ್ಮೆಲ್ಲ ಸುಖ ಸಂತೋಷವನ್ನು ಬದಿಗೊತ್ತಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆಯ ಸಿಬ್ಬಂದಿಗಳಿಗೆ ಅನ್ನ ನೀರು ವಿತರಿಸುವ ಮೂಲಕ ಸಾರ್ಥಕ ಸೇವೆಯನ್ನು ರಾಜುಗೌಡ ಟೀಮ್ ಸೇವಾ ಸಮಿತಿಯಿಂದ ಮಾಡಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಶರಣು ನಾಯಕ,ಪರಶುರಾಮ ನಾಟೆಕಾರ್ ಇತರರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…