ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದ ಕರಡಿ ಸಂಗಣ್ಣ 1 ಕೋಟಿ ದೇಣಿಗೆ

0
37

ಕೊಪ್ಪಳ: ಕೊವೀಡ್ -19, ನೊವೇಲ್ ಕೊರೋನಾ ವೈರಸ್ ತಡೆಗಟ್ಟುವ ನಿಯಂತ್ರಣಕ್ಕಾಗಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿ (ಎಂಪಿಎಲ್‌ಎಡಿಎಸ್) ಸಂಸದ ಸಂಗಣ್ಣ ಕರಡಿಯವರು 1 ಕೋಟಿ ರೂ. ನೆರವು ನೀಡಿದ್ದಾರೆ.

ಅವರು ಸೋಮವಾರದಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರನ್ನು ಭೇಟಿ ಮಾಡಿ, ಎಂಪಿಎಲ್‌ಎಡಿಎಸ್ ಯೋಜನೆಯ ಅನುದಾನದಡಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿನ 1 ಕೋಟಿ ರೂಪಾಯಿಗಳನ್ನು ನೀಡಲು ಒಪ್ಪಿಗೆ ಪತ್ರವನ್ನು ನೀಡಿದರು.

Contact Your\'s Advertisement; 9902492681

ಜಿಲ್ಲೆಯಲ್ಲಿ ಕೊರಾನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸದ್ಯದ ಪರಿಸ್ಥಿತಿ ಹಾಗೂ ಮುಂದಿನ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಧ್ಯವಿರುವ ಎಲ್ಲಾ ನೆರವು ಒದಗಿಸಿ ಕೊಡುವಲ್ಲಿ ಪ್ರಮಾಣಿ ಪ್ರಯತ್ನವನ್ನು ಮಾಡುವದಾಗಿ ಈ ಸಂದರ್ಭದಲ್ಲಿ ಹೇಳಿದರು.

ಕರೋನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಹಲವು ಕ್ರಮಗಳಿಗೆ ಸಹಕರಿಸಿ, ಸ್ವತಃ ತಾವೇ ಸಾರ್ವಜನಿಕರಿಗೆ ಈ ಬಗ್ಗೆ ಮುಂಜಾಗೃತ ಸೇರಿದಂತೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳೊಂದಿಗೆ ಹಾಗೂ ಇತರೆ ಜನಪ್ರತಿನಿಧಿಗಳೊಂದಿಗೆ ಸೇವೆಗೆ ನಿಂತಿರುವ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಬೀಕರವಾಗಿ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ಇಡಿ ವಿಶ್ವವನ್ನೆ ತಲ್ಲಣಗೊಳಿಸಿ ಸಂಕಷ್ಟಕ್ಕೆ ದೂಡಿದೆ, ಇಂತಹ ಸಂಕ್ರಾಮಣ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೈಗೊಂಡಿರುವ ಕ್ರಮಗಳನ್ನು ಅನುಸರಿಸಿ, ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ಕೊಪ್ಪಳ, ರಾಯಚೂರು, ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಡಳಿತ ಕೈಗೊಂಡಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ನಿರ್ಗತಿಕರು, ನಿರಾಶ್ರಿತರು, ಬಡವರು, ವಲಸಿಗರು, ಕಾರ್ಮಿಕರುಗಳು ತೊಂದರೆಗೊಳಗಾದರವರಿಗೆ ಸಹಾಯ ಮಾಡಲಾಗುತ್ತಿದೆ, ಅಲ್ಲದೇ ಸಾರ್ವಜನಿಕರು ಸಹ ಲಾಕ್ ಡೌನ್ ಉಲ್ಲಂಘಿಸದೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ
ವರದಿ:ಮರಿಗೌಡ ಬಾದರದಿನ್ನಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here