ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ನಿರ್ಗತಿಕರು, ಭಿಕ್ಷುಕರು ಹಾಗೂ ನಿರ್ವಸತಿಯರಿಗೆ ಸಾರ್ವಜನಿಕರು, ದಾನಿಗಳು ಅನುಕಂಪದಿಂದ ನೇರವಾಗಿ ಆಹಾರ ನೀಡಬಾರದು. ಬದಲಾಗಿ ಆಹಾರ ಧಾನ್ಯ ನೀಡಲಿಚ್ಛಿಸುವ ದಾನಿಗಳು ಆಹಾರ ಸಮಿತಿಗೆ ಸಂಪರ್ಕಿಸಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. 144 ನಿಷೇಧಾಜ್ಞೆ ಇರುವುದರಿಂದ ಕೆಲವು ವ್ಯಕ್ತಿಗಳು, ಸಂಘ ಸಂಸ್ಥೆಗಳು ತಯಾರಿಸಿದ ಆಹಾರವನ್ನು ನೇರವಾಗಿ ಭಿಕ್ಷುಕರಿಗೆ, ನಿರ್ಗಕತಿಕರಿಗೆ ನೀಡುತ್ತಿರುವುದು ನಿಷೇಧಾಜ್ಞೆ ಉಲ್ಲಂಘಿಸಿದಂತಾಗುತ್ತದೆ.
ನಿರ್ಗತಿಕರು, ಭಿಕ್ಷುಕರು ಹಾಗೂ ನಿರ್ವಸತಿಯರಿಗೆ ಆಹಾರ ಧಾನ್ಯ ನೀಡಲಿಚ್ಚಿಸುವ ದಾನಿಗಳು ನೇರವಾಗಿ ಆಹಾರ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಿ. ಎಂ. ಪಾಣಿ-9449985855ಗೆ ಸಂಪರ್ಕಿಸಿ ಕೇವಲ ದವಸ ಧಾನ್ಯಗಳನ್ನು ನೀಡಿ ಸ್ವೀಕೃತಿ ಪಡೆಯಬಹುದಾಗಿದೆ. ಯಾವುದೇ ರೀತಿಯ ತಯಾರಿಸಿದ ಆಹಾರವನ್ನು ನೀಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…